ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸಂಭವಿಸಿದ ಸ್ಫೋಟ….!

ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ.

ಕಳೆದ ಹಲವಾರು ವರುಷಗಳಿಂದ ಅಬ್ದುಲ್ ಗಫೂರ್ ಎಂಬವರು ಶೆಡ್ ನಿರ್ಮಿಸಿ ಸಿಡಿಮದ್ದು ತಯಾರಿಕೆ ಮಾಡುತ್ತಿದ್ದರು. ಈ ಘಟಕದಲ್ಲಿ ಸಿಡಿಮದ್ದಿಗೆ ಬೇಕಾದ ರಾಸಾಯನಿಕವನ್ನು ಮಿಶ್ರಣ ಮಾಡಿ ಕಾರ್ಮಿಕರು ಸಂಜೆಯ ಕಾಫಿ ಕುಡಿಯುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಏಕಾಏಕಿ ಘಟಕ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ 5 ಸೆಂಟ್ಸ್ ಜಾಗ ಸಂಪೂರ್ಣ ಹಾನಿಯಾಗಿದೆ.

ಆದರೆ ಯಾವುದೇ ಜೀವ ಹಾನಿಯಾಗಿಲ್ಲ. ಘಟನೆ ನಡೆದ ಕೂಡಲೇ ನೀರು ಹಾಕಿ ಬೆಂಕಿ ಆರಿಸುವ ಕಾರ್ಯವನ್ನು ಮಾಡಲಾಯಿತು. ಘಟನೆಯಿಂದಾಗಿ ಆಸುಪಾಸಿನ ಕೆಲವು ಮನೆಗಳಿಗೆ ಹಾನಿಯಾಗಿರುವುದಾಗಿ ಮಾಹಿತಿ ಲಭಿಸಿದೆ. ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ರವಿ, ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ವಿಟ್ಲ ಠಾಣಾ ಎಸ್.ಐ. ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!