ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ.
ಕಳೆದ ಹಲವಾರು ವರುಷಗಳಿಂದ ಅಬ್ದುಲ್ ಗಫೂರ್ ಎಂಬವರು ಶೆಡ್ ನಿರ್ಮಿಸಿ ಸಿಡಿಮದ್ದು ತಯಾರಿಕೆ ಮಾಡುತ್ತಿದ್ದರು. ಈ ಘಟಕದಲ್ಲಿ ಸಿಡಿಮದ್ದಿಗೆ ಬೇಕಾದ ರಾಸಾಯನಿಕವನ್ನು ಮಿಶ್ರಣ ಮಾಡಿ ಕಾರ್ಮಿಕರು ಸಂಜೆಯ ಕಾಫಿ ಕುಡಿಯುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಏಕಾಏಕಿ ಘಟಕ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ 5 ಸೆಂಟ್ಸ್ ಜಾಗ ಸಂಪೂರ್ಣ ಹಾನಿಯಾಗಿದೆ.
ಆದರೆ ಯಾವುದೇ ಜೀವ ಹಾನಿಯಾಗಿಲ್ಲ. ಘಟನೆ ನಡೆದ ಕೂಡಲೇ ನೀರು ಹಾಕಿ ಬೆಂಕಿ ಆರಿಸುವ ಕಾರ್ಯವನ್ನು ಮಾಡಲಾಯಿತು. ಘಟನೆಯಿಂದಾಗಿ ಆಸುಪಾಸಿನ ಕೆಲವು ಮನೆಗಳಿಗೆ ಹಾನಿಯಾಗಿರುವುದಾಗಿ ಮಾಹಿತಿ ಲಭಿಸಿದೆ. ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ರವಿ, ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ವಿಟ್ಲ ಠಾಣಾ ಎಸ್.ಐ. ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…