ಇತ್ತೀಚೆಗೆ ಅಗಲಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಬಿಜೆಪಿ ಮುಖಂಡರಾದ ಸತೀಶ್ ಪ್ರಭು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯು ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆಯಿತು.
ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮಾತನಾಡಿ, ಸತೀಶ್ ಪ್ರಭು ಅವರ ಉತ್ತಮ ಸಂಘಟಕರಾಗಿ, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ಅವಿರತವಾಗಿ ಶ್ರಮಿಸಿ, ಉತ್ತಮ ಕೊಡುಗೆ ನೀಡಿದ್ದಾರೆ. ಅವರಿಂದ ಇನ್ನಷ್ಟು ಸೇವೆ ಸಮಾಜಕ್ಕೆ, ನಾಡಿಗೆ ಅವಶ್ಯವಾಗಿತ್ತು. ಅವರ ಸಾಧನೆ ಎಂದಿಗೂ ಅವಿಸ್ಮರಣೀಯ ಎಂದರು. ಬಾಲ್ಯದಿಂದಲೇ ಸಂಘದ ಪ್ರೇರಣೆಯಿಂದ ಬದುಕನ್ನು ಸಮಾಜಕ್ಕಾಗಿ ಅರ್ಪಿಸಿದ್ದ ಅವರು ರಾಷ್ಟ್ರಧರ್ಮ, ಸಾಮಾಜಿಕ ರಂಗ, ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರಾಗಿ ಸಮಾಜ ಸೇವೆ ಸಲ್ಲಿಸಿ, ಭಾರತೀಯ ಜನತಾ ಪಾರ್ಟಿಯ ಮಂಡಲ ಹಾಗೂ ಜಿಲ್ಲಾ ಮಟ್ಟದ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ವಿಶ್ವಸ್ಥರೂ ಆಗಿದ್ದರು. ಅಲ್ಲದೇ ಸಂಘನಿಕೇತನ ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು ಎಂದು ಸತೀಶ್ ಪ್ರಭು ಅವರ ಸಮಾಜ ಮುಖಿ ಕಾರ್ಯಗಳನ್ನು ಅತಿಥಿ ಗಣ್ಯರು ನೆನಪಿಸಿಕೊಂಡರು. ಅವರು ಬದುಕಿದ ರೀತಿಯನ್ನು ಮೆಲುಕು ಹಾಕಿದ ಗಣ್ಯರು ಪುಷ್ಪನಮನದೊಂದಿಗೆ ನುಡಿನಮನ ಸಲ್ಲಿಸಿದರು. ಆರೆಸ್ಸೆಸ್ ಪ್ರಾಂತ ಸಹ ಕಾರ್ಯವಾಹ, ಹೊಸದಿಗಂತ ಪತ್ರಿಕೆಯ ಸಿಇಒ ಪಿ.ಎಸ್.ಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉದ್ಯಮಿ ಗುರುದತ್ ಕಾಮತ್ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿ.ಎ ಜಗನ್ನಾಥ ಕಾಮತ್ ಸೇರಿದಂತೆ ಅನೇಕರು ಶ್ರದ್ದಾಂಜಲಿ ಸಲ್ಲಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…