ಕಂಬಳ ಕೇವಲ ಕರಾವಳಿ ಭಾಗಕ್ಕೆ ಮಾತ್ರ ಸೀಮಿತವಲ್ಲ, ಅದು ಇಡೀ ದೇಶದ ಹೆಮ್ಮೆ ಎಂದು ಸಾರುವ ಮೂಲಕ ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪನ್ನು ನೀಡಿದೆ.
ಈ ತೀರ್ಪನ್ನು ಕಂಬಳದ ಇತಿಹಾಸದಲ್ಲಿ ಒಂದು “ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ” ಎಂದು ರಾಜ್ಯ ಕಂಬಳ ಅಸೋಸಿಯೇಶನ್ ಕೋಶಾಧಿಕಾರಿ ಮುಚ್ಚೂರು ಕಲ್ಕುಡೆ ಲೋಕೇಶ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ. ಕಂಬಳದ ಉಳಿವಿಗಾಗಿ ಹೋರಾಡಿದ ಕಂಬಳ ಅಸೋಶಿಯೇಶನ್, ಸಮಿತಿ, ಎಲ್ಲ ಕಂಬಳದ ವ್ಯವಸ್ಥಾಪಕರು, ಕೋಣಗಳ ಯಜಮಾನರು, ಅಭಿಮಾನಿಗಳು ಮತ್ತು ಕಂಬಳ ಪ್ರೇಮಿಗಳ ದಶಕಗಳ ಶ್ರಮಕ್ಕೆ ನ್ಯಾಯ ಸಿಕ್ಕಿದೆ. ವಿಶೇಷವಾಗಿ ರಾಜ್ಯ ಕಂಬಳ ಅಸೋಶಿಯೇಶನ್ ಅಧ್ಯಕ್ಷ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ, ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ಮತ್ತು ನೇತೃತ್ವದಲ್ಲಿ ನಡೆದ ಕಾನೂನು ಹೋರಾಟ ಮತ್ತು ಸಂಘಟನೆಗೆ ದೊಡ್ಡ ಮಟ್ಟದ ಯಶಸ್ಸು ದೊರೆತಿದೆ. ಬೆಂಗಳೂರು ಮತ್ತು ಶಿವಮೊಗ್ಗ ಜೆಲ್ಲೆಗಳಲ್ಲೂ ಕಂಬಳ ನಡೆಸಲು ಎದುರಾಗಿದ್ದ ಅಡೆತಡೆಗಳು ಈಗ ನಿವಾರಣೆಯಾದಂತಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…