ಕಂಬಳ ಕೇವಲ ಕರಾವಳಿ ಭಾಗಕ್ಕೆ ಮಾತ್ರ ಸೀಮಿತವಲ್ಲ, ಅದು ಇಡೀ ದೇಶದ ಹೆಮ್ಮೆ ಎಂದು ಸಾರುವ ಮೂಲಕ ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪನ್ನು ನೀಡಿದೆ.
ಈ ತೀರ್ಪನ್ನು ಕಂಬಳದ ಇತಿಹಾಸದಲ್ಲಿ ಒಂದು “ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ” ಎಂದು ರಾಜ್ಯ ಕಂಬಳ ಅಸೋಸಿಯೇಶನ್ ಕೋಶಾಧಿಕಾರಿ ಮುಚ್ಚೂರು ಕಲ್ಕುಡೆ ಲೋಕೇಶ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ. ಕಂಬಳದ ಉಳಿವಿಗಾಗಿ ಹೋರಾಡಿದ ಕಂಬಳ ಅಸೋಶಿಯೇಶನ್, ಸಮಿತಿ, ಎಲ್ಲ ಕಂಬಳದ ವ್ಯವಸ್ಥಾಪಕರು, ಕೋಣಗಳ ಯಜಮಾನರು, ಅಭಿಮಾನಿಗಳು ಮತ್ತು ಕಂಬಳ ಪ್ರೇಮಿಗಳ ದಶಕಗಳ ಶ್ರಮಕ್ಕೆ ನ್ಯಾಯ ಸಿಕ್ಕಿದೆ. ವಿಶೇಷವಾಗಿ ರಾಜ್ಯ ಕಂಬಳ ಅಸೋಶಿಯೇಶನ್ ಅಧ್ಯಕ್ಷ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ, ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ಮತ್ತು ನೇತೃತ್ವದಲ್ಲಿ ನಡೆದ ಕಾನೂನು ಹೋರಾಟ ಮತ್ತು ಸಂಘಟನೆಗೆ ದೊಡ್ಡ ಮಟ್ಟದ ಯಶಸ್ಸು ದೊರೆತಿದೆ. ಬೆಂಗಳೂರು ಮತ್ತು ಶಿವಮೊಗ್ಗ ಜೆಲ್ಲೆಗಳಲ್ಲೂ ಕಂಬಳ ನಡೆಸಲು ಎದುರಾಗಿದ್ದ ಅಡೆತಡೆಗಳು ಈಗ ನಿವಾರಣೆಯಾದಂತಾಗಿದೆ ಎಂದು ತಿಳಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…