ಭೀಕರ ರಸ್ತೆ ಅಪಘಾತದಲ್ಲಿ ಅಜ್ಜ ಮತ್ತು ಮೊಮ್ಮಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದೆ.
ಮೃತರನ್ನು 55 ವರ್ಷದ ಈಶ್ವರಪ್ಪ ಮತ್ತು ಅವರ 14 ವರ್ಷದ ಮೊಮ್ಮಗಳು ಸೃಷ್ಟಿ ಎಂದು ಗುರುತಿಸಲಾಗಿದೆ. ಈಕೆ ಕೂಡ್ಲಿಗಿ ಪಟ್ಟಣದ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿದ ಮೊಮ್ಮಗಳನ್ನು ಅಜ್ಜ ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಸ್ತೆಯ ಮೇಲೆ ಒಣಗಿಸಲು ಹಾಕಿದ್ದ ರಾಗಿಯ ಮೇಲೆ ಬೈಕ್ ಚಲಿಸಿದಾಗ ನಿಯಂತ್ರಣ ತಪ್ಪಿ ಜಾರಿ ಬಿದ್ದಿದೆ. ಬೈಕ್ ಸವಾರರು ಕೆಳಗೆ ಬಿದ್ದ ತಕ್ಷಣವೇ ಹಿಂದಿನಿಂದ ಬಂದ ತಮಿಳುನಾಡು ನೋಂದಣಿಯ ಕಂಟೈನರ್ ಲಾರಿ ಇವರ ಮೇಲೆ ಹರಿದಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೂಡ್ಲಿಗಿ ಪಿಎಸ್ಐ, ಸಿಸಿಪಿ ಪರಿಶಿಲನೆ ನಡೆಸಿದ್ದು, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…