ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಅಪರೂಪದ ಹಾಗೂ ಸಂತಸದ ಘಟನೆ ನಡೆದಿದೆ.
ಭಾರತೀಯ ತೋಳ `ಗೀತಾ’ ಒಟ್ಟು ಏಳು ಮರಿಗಳಿಗೆ ಜನ್ಮ ನೀಡಿದೆ. ಕಳೆದ ಮೂರು ವರ್ಷಗಳಿಂದ ಉದ್ಯಾನವನದಲ್ಲಿ ಭಾರತೀಯ ತೋಳಗಳನ್ನು ಸಾಕಲಾಗುತ್ತಿದ್ದು, ಇದು ಮೊದಲ ಯಶಸ್ವಿ ಸಂತಾನೋತ್ಪತ್ತಿಯಾಗಿದ್ದು ಮಹತ್ವದ ಮೈಲಿಗಲ್ಲಾಗಿದೆ. ಉದ್ಯಾನವನದ ಅಧಿಕಾರಿಗಳ ಪ್ರಕಾರ, ತಾಯಿ ತೋಳ ಹಾಗೂ ಎಲ್ಲಾ ಏಳು ಮರಿಗಳು ಆರೋಗ್ಯವಾಗಿದ್ದು, ಪಶುವೈದ್ಯರು ಮತ್ತು ಪ್ರಾಣಿ ಪಾಲಕರು ಅವುಗಳನ್ನು ನಿತ್ಯವೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಪ್ರಾಣಿಗಳ ಸಂರಕ್ಷಣೆ ಹಾಗೂ ಸೆರೆಹಿಡಿದ ಪರಿಸರದಲ್ಲಿ ಸಂತಾನೋತ್ಪತ್ತಿ ಕಾರ್ಯಕ್ರಮಕ್ಕೆ ಇದು ದೊಡ್ಡ ಸಾಧನೆ ಎಂದು ಪರಿಗಣಿಸಲಾಗಿದೆ. ಇದಲ್ಲದೆ, ಮರಿಗಳು ಈಗ ಆರೋಗ್ಯವಾಗಿದ್ದು ಚುರುಕಾಗಿ ಓಡಾಡುತ್ತಿವೆ. ಪ್ರವಾಸಿಗರ ಆಕರ್ಷಣೆಯಾಗಿರುವ ಈ ಮುದ್ದು ತೋಳ ಮರಿಗಳನ್ನು ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗಿದೆ. ಇದರಿಂದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುವ ನಿರೀಕ್ಷೆಯಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…