ಟಿಪ್ಪರ್ ಲಾರಿಯೊಂದು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ.
ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತನ್ನ ಬೈಕ್ನಲ್ಲಿ ಹಂಪನಕಟ್ಟೆ ಕಡೆಗೆ ಹೋಗುತ್ತಿರುವಾಗ ಆರೋಪಿ ತನ್ನ ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಗಣೇಶ ನಾಯಕ್ ಇವರು ಮೋಟಾರ್ ಸೈಕಲ್ ಸಮೇತ ರಸ್ತೆಯಲ್ಲಿ ಬಿದ್ದರು. ಈ ಸಂದರ್ಭದಲ್ಲಿ ಟಿಪ್ಪರ್ ಲಾರಿಯ ಹಿಂಬದಿಯ ಟಯರ್ ಹೆಲ್ಮೆಟ್ ಹಾಕಿದ ಗಣೇಶ ನಾಯಕ್ ಅವರ ತಲೆಯ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಗಣೇಶ ನಾಯಕ್ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…