ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ದುರ್ಘಟನೆ ಮಾಳ ಮುಳ್ಳೂರಿನಲ್ಲಿ ನಡೆದಿದೆ.

ನವೀನ್ ಬಜಗೋಳಿ ಮೃತ ದುರ್ದೈವಿ. ನವೀನ್ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದು, ಹಾವು ಹಿಡಿಯುವ ಕೆಲಸವನ್ನು ಮಾಡುತ್ತಿದ್ದರು. ಎಲ್ಲಿಯೋ ಹಾವು ಹಿಡಿದು ಕಾಡಿಗೆ ಬಿಡಲೆಂದು ಹೋಗುತ್ತಿರುವಾಗ ಅವಘಡ ಸಂಭವಿಸಿದೆ. ಪರಿಣಾಮವಾಗಿ ನವೀನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಕೂಟಿಯ ಸಹಸವಾರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.



