ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ ಅವರು ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ಅತ್ಯಂತ ಚುರುಕಿನ, ಪ್ರತಿಭಾಶಾಲಿ ಯುವ ಭಜನಾ ತರಬೇತುದಾರರಾಗಿದ್ದರು. ಭಜನಾ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ್ದರು. ಅವರಿಗೆ ಆತ್ಮೀಯರೊಬ್ಬರು ಕರೆ ಮಾಡಿದಾಗ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡು ಮನೆಯ ಮಾಡಿನ ಹಂಚು ತೆಗೆದು ಒಳಗೆ ಹೋಗಿ ನೋಡಿದಾಗ ಪ್ರಕಾಶ್ ಅವರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಪ್ರಕಾಶ್ ಕುಲಾಲ್ ಅತಿದೊಡ್ಡ ಭಜನಾ ಕಾರ್ಯಕ್ರಮಗಳಲ್ಲಿ ಒಂದಾದ ಸಂಕೀರ್ತನ ಮಂದಾರ್ತಿ ಸೇರಿ ಹತ್ತು ಹಲವು ಕಡೆಗಳಲ್ಲಿ ತಮ್ಮನ್ನು ಭಜನೆಗಾಗಿ ಸಮರ್ಪಿಸಿಕೊಂಡ ಯುವಕ. ಯಾವುದೇ ಹಣ ಅಥವಾ ಇತರ ಫಲಾಪೇಕ್ಷೆಗಳಿಲ್ಲದೆ ಭಜನಾ ತರಬೇತಿ ನೀಡುತ್ತಿದ್ದ, ತನ್ನ ಹೆಚ್ಚಿನ ಸಮಯವನ್ನು ಭಜನೆಗಾಗಿ ಮೀಸಲಿಡುತ್ತಿದ್ದರು. ಮೃತರು ಪತ್ನಿ, ಮಗು ಮತ್ತು ಪೋಷಕರನ್ನು ಅಗಲಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…