ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಬಿಸಿರೋಡು ರೈಲ್ವೆ ಮೇಲ್ಸೇತುವೆಯ ಪಕ್ಕ ಹಾಕಲಾಗಿದ್ದ ಪ್ಲೆಕ್ಸ್ ಹೆದ್ದಾರಿಯ ಮಧ್ಯ ಭಾಗಕ್ಕೆ ಬಿದ್ದಿದೆ.
ಕಳೆದ ವಾರ ಇದೇ ರೀತಿ ಸರ್ಕಲ್ ಬಳಿಯಲ್ಲಿ ಹಾಕಲಾಗಿದ್ದ ಪ್ಲೆಕ್ಸ್ಗಳು ಹೆದ್ದಾರಿ ಮೇಲೆ ಬಿದ್ದ ಬಗ್ಗೆ ವರದಿ ಮಾಡಲಾಗಿತ್ತು. ಸೆಕೆಂಡ್ಗೆ ಹತ್ತಾರು ವಾಹನಗಳು ಸಂಚಾರ ಮಾಡುವ ಹೆದ್ದಾರಿಯ ಬದಿಯಲ್ಲಿ ಬೀಳುವ ರೀತಿಯಲ್ಲಿ ಪ್ಲೆಕ್ಸ್ ಅಳವಡಿಕೆಗೆ ಪುರಸಭೆ ಅನಧಿಕೃತವಾಗಿ ಅವಕಾಶ ನೀಡಿರುವುದು ಮುಂದೊಂದು ದಿನ ಅನಾಹುತಗಳು ನಡೆಯುವುದಕ್ಕೆ ಕಾರಣವಾಗಬಹುದು. ಅನಧಿಕೃತ ಪ್ಲೆಕ್ಸ್ ಅಳವಡಿಕೆಗೆ ಅವಕಾಶ ನೀಡಬಾರದು ಮತ್ತು ಪ್ಲೆಕ್ಸ್ ಬಿದ್ದು ಅನಾಹುತಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದರು ಕೂಡ ಯಾವುದೇ ಸ್ಪಂದನೆ ಪುರಸಭೆಯಿಂದ ಸಿಕ್ಕಿದಂತೆ ಕಂಡು ಬಂದಿಲ್ಲ. ರಸ್ತೆ ಬದಿಯಲ್ಲಿ ರಾಜರೋಷವಾಗಿ ಬ್ಯಾನರ್ಗಳು, ಪ್ಲೆಕ್ಸ್ಗಳು ತಲೆಎತ್ತಿ ನಿಂತಿವೆ. ಜೊತೆಗೆ ದಿನವೊಂದಕ್ಕೆ ಪ್ಲೆಕ್ಸ್ಗಳು ಕೆಳಗೆ ಬೀಳುತ್ತಲೇ ಇವೆ. ಆದರೆ ಕಣ್ಣಿದ್ದು ಕುರುಡನಂತೆ ಆಗಿರುವ ಪುರಸಭೆಯ ಕಿವಿ ಹಿಂಡುವವರು ಯಾರು ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…