ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಬಿಸಿರೋಡು ರೈಲ್ವೆ ಮೇಲ್ಸೇತುವೆಯ ಪಕ್ಕ ಹಾಕಲಾಗಿದ್ದ ಪ್ಲೆಕ್ಸ್ ಹೆದ್ದಾರಿಯ ಮಧ್ಯ ಭಾಗಕ್ಕೆ ಬಿದ್ದಿದೆ.
ಕಳೆದ ವಾರ ಇದೇ ರೀತಿ ಸರ್ಕಲ್ ಬಳಿಯಲ್ಲಿ ಹಾಕಲಾಗಿದ್ದ ಪ್ಲೆಕ್ಸ್ಗಳು ಹೆದ್ದಾರಿ ಮೇಲೆ ಬಿದ್ದ ಬಗ್ಗೆ ವರದಿ ಮಾಡಲಾಗಿತ್ತು. ಸೆಕೆಂಡ್ಗೆ ಹತ್ತಾರು ವಾಹನಗಳು ಸಂಚಾರ ಮಾಡುವ ಹೆದ್ದಾರಿಯ ಬದಿಯಲ್ಲಿ ಬೀಳುವ ರೀತಿಯಲ್ಲಿ ಪ್ಲೆಕ್ಸ್ ಅಳವಡಿಕೆಗೆ ಪುರಸಭೆ ಅನಧಿಕೃತವಾಗಿ ಅವಕಾಶ ನೀಡಿರುವುದು ಮುಂದೊಂದು ದಿನ ಅನಾಹುತಗಳು ನಡೆಯುವುದಕ್ಕೆ ಕಾರಣವಾಗಬಹುದು. ಅನಧಿಕೃತ ಪ್ಲೆಕ್ಸ್ ಅಳವಡಿಕೆಗೆ ಅವಕಾಶ ನೀಡಬಾರದು ಮತ್ತು ಪ್ಲೆಕ್ಸ್ ಬಿದ್ದು ಅನಾಹುತಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದರು ಕೂಡ ಯಾವುದೇ ಸ್ಪಂದನೆ ಪುರಸಭೆಯಿಂದ ಸಿಕ್ಕಿದಂತೆ ಕಂಡು ಬಂದಿಲ್ಲ. ರಸ್ತೆ ಬದಿಯಲ್ಲಿ ರಾಜರೋಷವಾಗಿ ಬ್ಯಾನರ್ಗಳು, ಪ್ಲೆಕ್ಸ್ಗಳು ತಲೆಎತ್ತಿ ನಿಂತಿವೆ. ಜೊತೆಗೆ ದಿನವೊಂದಕ್ಕೆ ಪ್ಲೆಕ್ಸ್ಗಳು ಕೆಳಗೆ ಬೀಳುತ್ತಲೇ ಇವೆ. ಆದರೆ ಕಣ್ಣಿದ್ದು ಕುರುಡನಂತೆ ಆಗಿರುವ ಪುರಸಭೆಯ ಕಿವಿ ಹಿಂಡುವವರು ಯಾರು ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…