ವಿದ್ಯಾಗಿರಿ: ‘ಮಾಧ್ಯಮ ಕ್ಷೇತ್ರದಲ್ಲಿ ಧನಾತ್ಮಕ ಚಿಂತನೆಯು ಇಂದಿನ ಅವಶ್ಯವಾಗಿದೆ. ನೀವು ಸಮಾಜಕ್ಕೆ ಕೊಡುಗೆ ನೀಡುವಂತವರಾಗಬೇಕು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಗುರುವಾರ ಪಿ.ಜಿ ಸೆಮಿನಾರ್ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ‘ಫೀರ್ ಮಿಲೇಂಗೆ’ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವೃತ್ತಿ ಜೀವನದಲ್ಲಿ ನೈತಿಕತೆ ಮುಖ್ಯ. ಯಾವುದೇ ಸಂಬಆಧ ಅಥವಾ ಕೆಲಸ ನಿರ್ವಹಿಸುವಾಗ ನಿರೀಕ್ಷೆ ರಹಿತ ಮನೋಭಾವ ಹೊಂದಿರಬೇಕು. ಆಗ ಯಶಸ್ಸು ಸಾಧ್ಯ ಎಂದರು. ಎಲ್ಲರನ್ನೂ ಪ್ರೀತಿಸಿ ಗೌರವಿಸುವ ಡಾ. ಎಂ. ಮೋಹನ ಆಳ್ವರ ಗುಣವು ಅವರ ಯಶಸ್ವಿಗೆ ಮೂಲ. ಪ್ರತಿಯೊಬ್ಬರು ಅನನ್ಯ ವ್ಯಕ್ತಿತ್ವದೊಂದಿಗೆ ಸಮಾಜದಲ್ಲಿ ಒಗ್ಗಟ್ಟಿನಿಂದ ಬದುಕುವ ಮನಸ್ಥಿತಿ ಹೊಂದಿರಬೇಕು. ಪತ್ರಿಕೋದ್ಯಮ ವಿಭಾಗದಲ್ಲಿರುವ ‘ಜೀವಕಳೆ’ ನನಗೆ ಇಷ್ಟ ಎಂದು ಸಂತಸ ವ್ಯಕ್ತಪಡಿಸಿದರು.
ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ‘ಪತ್ರಿಕೋದ್ಯಮ ವಿದ್ಯಾರ್ಥಿಗಳು ಪ್ರೀತಿ, ವಿಶ್ವಾಸದಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಖುಷಿ ನೀಡಿದೆ. ಇಲ್ಲಿ ಕಲಿತ ಪಾಠ ಬದುಕಿನಲ್ಲಿ ಅಳವಡಿಸಿಕೊಂಡಾಗ ಶೇಕಡಾ 100 ಸಾಧನೆ ಮಾಡುತ್ತೀರಿ’ ಎಂದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಇದ್ದರು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.
ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ, ಸಹ ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಹೊಡೆಯಾಲ, ಸಹಾಯಕ ಪ್ರಾಧ್ಯಾಪಕ ಹರ್ಷವರ್ಧನ ಪಿ.ಆರ್, ನಿಶಾನ್ ಕೋಟ್ಯಾನ್, ಇಂಚರಾ ಗೌಡ, ದೀಕ್ಷಿತಾ, ದುರ್ಗಾ ಪ್ರಸನ್ನ, ರಕ್ಷಿತಾ ತೋಡಾರು, ಆಡ್ಮಿಷನ್ ಅಧಿಕಾರಿ ಹನಮಂತಪ್ಪ ಸಿಮಿಕೇರಿ ಇದ್ದರು. ವಿದ್ಯಾರ್ಥಿಗಳಾದ ಅವಿನಾಶ್ ಕಟೀಲ್ ಮತ್ತು ಪ್ರಖ್ಯಾತ್ ಮಿಜಾರ್ ನಿರೂಪಿಸಿದರು.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…