ನಿಲ್ಲಿಸಿದ್ದ ಸ್ಕೂಟರ್ಗೆ ಹಿಂಬದಿಯಿಂದ ಕೆ.ಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರು ಗಾಯಗೊಂಡ ಘಟನೆ ಬಂಟ್ವಾಳ – ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಜಾಲಕಟ್ಟೆ ಬಸವನಗುಡಿ ಎಂಬಲ್ಲಿ ಸಂಭವಿಸಿದೆ.

ಸ್ಕೂಟರ್ ಸವಾರರಾದ ಬಡಗಕಜೆಕಾರು ಅಂಚೆ ಕಛೇರಿ ತಾತ್ಕಾಲಿಕ ಪೋಸ್ಟ್ ಮಾಸ್ಟರ್, ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನಿವಾಸಿ ಶ್ರೇಯಸ್ ಹಾಗೂ ಸಹೋದ್ಯೋಗಿ ಶಾಲಿನಿ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಶ್ರೇಯಸ್ ಅವರು ಅಂಚೆ ಇಲಾಖೆಯ ಕೆಲಸದ ನಿಮಿತ್ತ ಕೇಂದ್ರ ಅಂಚೆ ಕಛೇರಿಯಾದ ಬಸವನಗುಡಿಯಲ್ಲಿರುವ ಪುಂಜಾಲಕಟ್ಟೆ ಅಂಚೆ ಕಛೇರಿಗೆಂದು ಶಾಲಿನಿ ಯು. ಅವರನ್ನು ಸಹಸವಾರರಾಗಿ ಕುಳ್ಳಿರಿಸಿಕೊಂಡು ಬಸವನಗುಡಿ ಎಂಬಲ್ಲಿರುವ ಅಂಚೆ ಕಛೇರಿಯ ಮುಂಭಾಗ ತಲುಪಿ ಕೇಂದ್ರ ಅಂಚೆ ಕಛೇರಿಗೆ ಹೋಗಲು ಆಕ್ಟಿವಾ ಸ್ಕೂಟರ್ನ್ನು ಇಂಡಿಕೇಟರ್ ಹಾಕಿ ನಿಲ್ಲಿಸಿದಾಗ ಅವರ ಹಿಂದಿನಿಂದ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ನ ಚಾಲಕನಾದ ಮಂಜುನಾಥ ಉಪ್ಪಾರ ಎಂಬಾತನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿಕೊಂಡು ಬಂದು ಶ್ರೇಯಸ್ ಅವರ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಶ್ರೇಯಸ್ ಹಾಗೂ ಸಹಸವಾರೆ ಶಾಲಿನಿ ಯು. ಅವರು ಸ್ಕೂಟರ್ ಸಮೇತ ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.



