ನಿಲ್ಲಿಸಿದ್ದ ಸ್ಕೂಟರ್ಗೆ ಹಿಂಬದಿಯಿಂದ ಕೆ.ಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರು ಗಾಯಗೊಂಡ ಘಟನೆ ಬಂಟ್ವಾಳ – ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಜಾಲಕಟ್ಟೆ ಬಸವನಗುಡಿ ಎಂಬಲ್ಲಿ ಸಂಭವಿಸಿದೆ.
ಸ್ಕೂಟರ್ ಸವಾರರಾದ ಬಡಗಕಜೆಕಾರು ಅಂಚೆ ಕಛೇರಿ ತಾತ್ಕಾಲಿಕ ಪೋಸ್ಟ್ ಮಾಸ್ಟರ್, ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನಿವಾಸಿ ಶ್ರೇಯಸ್ ಹಾಗೂ ಸಹೋದ್ಯೋಗಿ ಶಾಲಿನಿ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಶ್ರೇಯಸ್ ಅವರು ಅಂಚೆ ಇಲಾಖೆಯ ಕೆಲಸದ ನಿಮಿತ್ತ ಕೇಂದ್ರ ಅಂಚೆ ಕಛೇರಿಯಾದ ಬಸವನಗುಡಿಯಲ್ಲಿರುವ ಪುಂಜಾಲಕಟ್ಟೆ ಅಂಚೆ ಕಛೇರಿಗೆಂದು ಶಾಲಿನಿ ಯು. ಅವರನ್ನು ಸಹಸವಾರರಾಗಿ ಕುಳ್ಳಿರಿಸಿಕೊಂಡು ಬಸವನಗುಡಿ ಎಂಬಲ್ಲಿರುವ ಅಂಚೆ ಕಛೇರಿಯ ಮುಂಭಾಗ ತಲುಪಿ ಕೇಂದ್ರ ಅಂಚೆ ಕಛೇರಿಗೆ ಹೋಗಲು ಆಕ್ಟಿವಾ ಸ್ಕೂಟರ್ನ್ನು ಇಂಡಿಕೇಟರ್ ಹಾಕಿ ನಿಲ್ಲಿಸಿದಾಗ ಅವರ ಹಿಂದಿನಿಂದ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ನ ಚಾಲಕನಾದ ಮಂಜುನಾಥ ಉಪ್ಪಾರ ಎಂಬಾತನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿಕೊಂಡು ಬಂದು ಶ್ರೇಯಸ್ ಅವರ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಶ್ರೇಯಸ್ ಹಾಗೂ ಸಹಸವಾರೆ ಶಾಲಿನಿ ಯು. ಅವರು ಸ್ಕೂಟರ್ ಸಮೇತ ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…