ನಿಲ್ಲಿಸಿದ್ದ ಸ್ಕೂಟರ್ಗೆ ಹಿಂಬದಿಯಿಂದ ಕೆ.ಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರು ಗಾಯಗೊಂಡ ಘಟನೆ ಬಂಟ್ವಾಳ – ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಜಾಲಕಟ್ಟೆ ಬಸವನಗುಡಿ ಎಂಬಲ್ಲಿ ಸಂಭವಿಸಿದೆ.
ಸ್ಕೂಟರ್ ಸವಾರರಾದ ಬಡಗಕಜೆಕಾರು ಅಂಚೆ ಕಛೇರಿ ತಾತ್ಕಾಲಿಕ ಪೋಸ್ಟ್ ಮಾಸ್ಟರ್, ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನಿವಾಸಿ ಶ್ರೇಯಸ್ ಹಾಗೂ ಸಹೋದ್ಯೋಗಿ ಶಾಲಿನಿ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಶ್ರೇಯಸ್ ಅವರು ಅಂಚೆ ಇಲಾಖೆಯ ಕೆಲಸದ ನಿಮಿತ್ತ ಕೇಂದ್ರ ಅಂಚೆ ಕಛೇರಿಯಾದ ಬಸವನಗುಡಿಯಲ್ಲಿರುವ ಪುಂಜಾಲಕಟ್ಟೆ ಅಂಚೆ ಕಛೇರಿಗೆಂದು ಶಾಲಿನಿ ಯು. ಅವರನ್ನು ಸಹಸವಾರರಾಗಿ ಕುಳ್ಳಿರಿಸಿಕೊಂಡು ಬಸವನಗುಡಿ ಎಂಬಲ್ಲಿರುವ ಅಂಚೆ ಕಛೇರಿಯ ಮುಂಭಾಗ ತಲುಪಿ ಕೇಂದ್ರ ಅಂಚೆ ಕಛೇರಿಗೆ ಹೋಗಲು ಆಕ್ಟಿವಾ ಸ್ಕೂಟರ್ನ್ನು ಇಂಡಿಕೇಟರ್ ಹಾಕಿ ನಿಲ್ಲಿಸಿದಾಗ ಅವರ ಹಿಂದಿನಿಂದ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ನ ಚಾಲಕನಾದ ಮಂಜುನಾಥ ಉಪ್ಪಾರ ಎಂಬಾತನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿಕೊಂಡು ಬಂದು ಶ್ರೇಯಸ್ ಅವರ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಶ್ರೇಯಸ್ ಹಾಗೂ ಸಹಸವಾರೆ ಶಾಲಿನಿ ಯು. ಅವರು ಸ್ಕೂಟರ್ ಸಮೇತ ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…