ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.
ಬಿಜೆಪಿ ಕಾಸರಗೋಡು ಜಿಲ್ಲಾ ಕಚೇರಿ ಸಂರ್ಶಿಸಿದ ಅವರನ್ನು ಜಿಲ್ಲಾಧ್ಯಕ್ಷೆ ಹಾಗೂ ಕಾಸರಗೋಡು ವಿಧಾನಸಭಾ ಕ್ಷೇತ್ರ ಎನ್. ಡಿ ಎ ಅಭ್ರ್ಥಿ ಅಶ್ವಿನಿ ಎಂ. ಎಲ್ ಶಾಲು ಹಾಕಿ ಸ್ವಾಗತಿಸಿದರು.
ಇದೇ ಮೊದಲ ಬಾರಿಗೆ ಕಾಸರಗೋಡಿಗೆ ಆಗಮಿಸಿದ ಅವರು ಬಿಜೆಪಿಯ ಪ್ರತಿಷ್ಠಿತ ಕ್ಷೇತ್ರಗಳಾದ ಮಂಜೇಶ್ವರ ಮತ್ತು ಕಾಸರಗೋಡಿನ ಸಾಧ್ಯತೆಗಳ ಅವಲೋಕನ ನಡೆಸಿದರು ಮತ್ತು ಚಟುವಟಿಕೆಗಳ ಮಾಹಿತಿ ಪಡೆದರು. ಕಾಸರಗೋಡಿನ ಚುನಾವಣಾ ಉಸ್ತುವಾರಿ ಹೊಂದಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪನ್ವೇಲ್ ಶಾಸಕ ಪ್ರಶಾಂತ ಠಾಕೂರ್, ಕೋಝಿಕ್ಕೋಡ್ ವಲಯ ಕರ್ಯರ್ಶಿ ಸುಧಾಮ ಗೋಸಾಡ, ಜಿಲ್ಲಾ ಪ್ರಧಾನ ಕರ್ಯರ್ಶಿ ಪಿ. ಆರ್. ಸುನಿಲ್, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಸುಕುಮಾರ ಕುದ್ರೆಪಾಡಿ, ಗುರುಪ್ರಸಾದ ಪ್ರಭು, ಹರೀಶ ನಾರಂಪಾಡಿ, ಪನ್ವೇಲ್ ಕೌನ್ಸಿಲರ್ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…