ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ ಸ್ವಯಂ-ಗಣತಿ (Self-Enumeration) ಪ್ರಕ್ರಿಯೆ ಆರಂಭವಾಗಿದೆ.
Census of India ಅಡಿಯಲ್ಲಿ ನಡೆಯುತ್ತಿರುವ ಈ ಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಹಾಗೂ ಹೌಸಿಂಗ್ ಸೆನ್ಸಸ್ಗಾಗಿ ಸ್ವಯಂ-ಗಣತಿ ಪ್ರಕ್ರಿಯೆಯನ್ನು ಏಪ್ರಿಲ್ 1ರಿಂದ 15ರವರೆಗೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಏಪ್ರಿಲ್ 1ರಿಂದ ಮೊದಲ ಹಂತ ಪ್ರಾರಂಭವಾಗಿದ್ದು, ಜನರು ಡಿಜಿಟಲ್ ಪೋರ್ಟಲ್ ಮೂಲಕ ಸ್ವತಃ ತಮ್ಮ ಮಾಹಿತಿಯನ್ನು ಭರ್ತಿ ಮಾಡಬಹುದಾಗಿದೆ.
ಈ ಕುರಿತು ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರಾದ ಮೃತ್ಯುಂಜಯ್ ಕುಮಾರ್ ನಾರಾಯಣ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ಜನಗಣತಿಯಲ್ಲಿ ಭಾಗವಹಿಸಲು ಯಾವುದೇ ದಾಖಲೆಗಳನ್ನು ಒದಗಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬಾರಿ ಸರ್ಕಾರ ಜನರಿಗೆ ‘ಸೆಲ್ಫ್ ಎನ್ಯುಮರೇಷನ್’ ಎಂಬ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ. ಇದರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡುವ ಮುನ್ನವೇ 15 ದಿನಗಳ ಅವಧಿಯಲ್ಲಿ ನಾಗರಿಕರು ತಮ್ಮ ಮಾಹಿತಿಯನ್ನು ತಾವೇ ಆನ್ಲೈನ್ ಮೂಲಕ ದಾಖಲಿಸಿಕೊಳ್ಳಬಹುದಾಗಿದೆ.
ಸ್ವಯಂ-ಗಣತಿಯನ್ನು ನಾಲ್ಕು ಪ್ರಮುಖ ಹಂತಗಳಲ್ಲಿ ನಡೆಸಲಾಗುತ್ತದೆ.
ಮೊದಲ ಹಂತ – ನೋಂದಣಿ
ನಾಗರಿಕರು https://se.census.gov.in ವೆಬ್ಸೈಟ್ಗೆ ಭೇಟಿ ನೀಡಿ ಮೊಬೈಲ್ ಸಂಖ್ಯೆಯ ಮೂಲಕ OTP ಪಡೆದು ಲಾಗಿನ್ ಆಗಬೇಕು. ಬಳಿಕ ಪ್ರಾಥಮಿಕ ವಿವರಗಳನ್ನು ದಾಖಲಿಸಿ ನೋಂದಣಿ ಪೂರ್ಣಗೊಳಿಸಬೇಕು.
ನೋಂದಣಿಯ ಬಳಿಕ ವಿಳಾಸ ಮತ್ತು ಸ್ಥಳದ ಮಾಹಿತಿ ಪರಿಶೀಲನೆ ಮಾಡಬೇಕು. ಮನೆ ಮತ್ತು ಸ್ಥಳದ ವಿವರಗಳನ್ನು ಸರಿಯಾಗಿ ಗುರುತಿಸಿ ದೃಢೀಕರಿಸಬೇಕು.
ಮೂರನೇ ಹಂತ – ಮಾಹಿತಿ ನಮೂದಿಸುವುದಾಗಿರುತ್ತದೆ.
ಕುಟುಂಬದ ಸದಸ್ಯರ ವಿವರಗಳನ್ನು ದಾಖಲಿಸಿ, ನೀಡಿದ ಮಾಹಿತಿಯನ್ನು ಪರಿಶೀಲಿಸಿದ ಬಳಿಕ ಅಂತಿಮವಾಗಿ ‘Final Submit’ ಮಾಡಬೇಕು. ಈ ಹಂತದಲ್ಲಿ ಸೆನ್ಸಸ್ ಐಡಿ (SE ID) ಸೃಷ್ಟಿಯಾಗುತ್ತದೆ.
ನಂತರ ಗಣತಿದಾರರು ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪರಿಶೀಲಿಸುತ್ತಾರೆ. ಅಗತ್ಯವಿದ್ದಲ್ಲಿ ತಿದ್ದುಪಡಿ ಕೂಡ ಮಾಡಲಾಗುತ್ತದೆ.
ಡಿಜಿಟಲ್ ವ್ಯವಸ್ಥೆಯ ಮೂಲಕ ಸುಲಭ, ವೇಗದ ಹಾಗೂ ಪಾರದರ್ಶಕ ಗಣತಿ ನಡೆಸುವ ಉದ್ದೇಶದಿಂದ ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಇದರ ಪ್ರಯೋಜನ ಪಡೆಯುವಂತೆ ಸರ್ಕಾರ ಈಗಾಗಲೇ ಮನವಿ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗು ಆಯಾ ತಾಲೂಕುಗಳ ತಹಶೀಲ್ದಾರರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…