ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಶೆಟ್ಟಿ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ.ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ರವೀಂದ್ರನಾಥ ಶೆಟ್ಟಿ ಅವರ ಅಗಲುವಿಕೆ ಸಮಾಜಕ್ಕೆ ಆದ ಬಲು ದೊಡ್ಡ ನಷ್ಟವಾಗಿದೆ. ಯೂನಿಯನ್ ಬ್ಯಾಂಕಿನ ಅಧ್ಯಕ್ಷರಿಂದ ಹಿಡಿದು ಸಾಮಾನ್ಯ ಸಿಬ್ಬಂದಿಗಳೊಂದಿಗೆ ಅನ್ಯೋನ್ಯ ಒಡನಾಟ ಹೊಂದಿದ್ದ ಅವರು ಬಂಟರ ಮಾತೃ ಸಂಘದಲ್ಲಿ ಪದಾಧಿಕಾರಿಯಾಗಿ ಸಲ್ಲಿಸಿರುವ ಸೇವೆ ಎಂದೂ ಮರೆಯಲಾಗದು ಎಂದರು.
ಮಾತೃ ಸಂಘದ ತಾಲೂಕು ಸಮಿತಿಯ ಮಾಜಿ ಸಂಚಾಲಕ ಜಯರಾಮ ಸಾಂತ ಮಾತನಾಡಿ, ರವೀಂದ್ರನಾಥ ಶೆಟ್ಟಿ ಅವರ ಪರೋಪಕಾರಿ ಮನೋಭಾವ ಸರ್ವರಿಗೂ ಮಾದರಿಯಾಗಿದೆ ಎಂದರು.
ಬಂಟರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ವಸಂತ ಶೆಟ್ಟಿ ಅವರು ಮಾತನಾಡಿ, ಸಂಘದ ಕೋಶಾಧಿಕಾರಿಯಾಗಿ ಅನುಪಮ ಸೇವೆ ಸಲ್ಲಿಸಿದ್ದ ರವೀಂದ್ರನಾಥ ಶೆಟ್ಟಿ ಅವರು ಅನೇಕ ಕ್ರೀಡಾಪಟುಗಳಿಗೆ ತಮ್ಮ ಬ್ಯಾಂಕಿನಲ್ಲಿ ಉದ್ಯೋಗ ನೀಡಿ ಸಹೃದಯತೆ ಮೆರೆದವರು. ರಾಮಕೃಷ್ಣ ವಿದ್ಯಾ ಸಂಸ್ಥೆಗೆ ಅವರು ತಮ್ಮ ಬ್ಯಾಂಕ್ ವತಿಯಿಂದ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು.
ಡಾ.ಆಶಾ ಜ್ಯೋತಿ ರೈ ಅವರು ಮಾತನಾಡಿ, ನಗುಮುಖದ ನಿಷ್ಕಳಂಕ ವ್ಯಕ್ತಿತ್ವದ ರವೀಂದ್ರನಾಥ ಶೆಟ್ಟಿ ಅವರು ಎಲ್ಲರೊಂದಿಗೆ ಬೆರೆಯುವ ಉದಾತ್ತ ಮನೋಭಾವ ಹೊಂದಿದ್ದರು ಎಂದು ಹೇಳಿದರು.
ದಿವಾಕರ ಸಾಮಾನಿ ಚೇಳಾರ್ ಗುತ್ತು ಅವರು ಮಾತನಾಡಿ, ಸಕಾರಾತ್ಮಕ ವ್ಯಕ್ತಿತ್ವಹೊಂದಿದ್ದ ರವೀಂದ್ರನಾಥ ಶೆಟ್ಟಿ ಅವರು ಬಂಟರ ಮಾತೃ ಸಂಘ ಆಯೋಜನೆಯ ಶ್ರೀ ಗಣೇಶೋತ್ಸವದ ಯಶಸ್ಸಿಗೆ ಗಣನೀಯ ಕೊಡುಗೆ ನೀಡಿದ್ದಾರೆ ಎಂದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿ.ಎ.ರಾಮಮೋಹನ ರೈ, ಮಾಜಿ ಕಾರ್ಯದರ್ಶಿ ಎಂ.ಸುಂದರ ಶೆಟ್ಟಿ, ಹಿರಿಯ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು. ಉಲ್ಲಾಸ್ ಶೆಟ್ಟಿ ಪೆರ್ಮುದೆ ಕಾರ್ಯಕ್ರಮ ನಿರ್ವಹಿಸಿದರು.
ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ…
ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು,…
ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ…
ಛಾವಣಿಯ ಶೀಟ್ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ…
ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್…
ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.…