ಮಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿಲ್ಲವ ಸಮುದಾಯದ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ತಮ್ಮ ಸಮಾಜ ಸೇವೆಯ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅವರನ್ನು ಕಡೆಗಣಿಸಿದೆ ಎಂಬ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ’ ಎಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಜಿಲ್ಲಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಸುವರ್ಣ ಹೇಳಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಬಿಲ್ಲವ, ಈಡಿಗ, ನಾಮದಾರಿ ಸಮುದಾಯಗಳು ಅವರ ಜೊತೆ ಇದ್ದಾರೆ. ಹರಿಪ್ರಸಾದ್ ಪರ ಕೆಲಸ ಮಾಡಲು ನಾವು ಸದಾ ಸಿದ್ಧ.
ಪಕ್ಷ ಅವರನ್ನು ನಿರ್ಲಕ್ಷಿಸುವುದು ತರವಲ್ಲ, ನಿರ್ಲಕ್ಷಿಸಿದರೆ ನಾವು ಸುಮ್ಮನಿರುವುದಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅವರ ಶ್ರಮ ಮತ್ತು ಶ್ರಮವಿದೆ. ರಾಷ್ಟ್ರಮಟ್ಟದಲ್ಲಿ ಬೆಳೆದ ಹರಿಪ್ರಸಾದ್ ಅವರಿಗೆ ಅನ್ಯಾಯವಾದರೆ ಸಮಾಜ ಸಹಿಸುವುದಿಲ್ಲ. ಸಮಯ ಮಿಂಚಿಲ್ಲ. ಈಗಲಾದರೂ ಸೂಕ್ತ ಸಚಿವ ಸ್ಥಾನ ಎಂದು ಒತ್ತಾಯಿಸಿದರು. ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸುತ್ತೇವೆ. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಸುರೇಶ್ಚಂದ್ರ ಕೋಟ್ಯಾನ್ ಅವರೊಂದಿಗೆ ಪ್ರೇಮನಾಥ ಕೆ, ಲೋಕನಾಥ ಪೂಜಾರಿ, ಸುರೇಶ್, ಶೋಭಕೇಶವ್ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…