ಮಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿಲ್ಲವ ಸಮುದಾಯದ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ತಮ್ಮ ಸಮಾಜ ಸೇವೆಯ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅವರನ್ನು ಕಡೆಗಣಿಸಿದೆ ಎಂಬ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ’ ಎಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಜಿಲ್ಲಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಸುವರ್ಣ ಹೇಳಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಬಿಲ್ಲವ, ಈಡಿಗ, ನಾಮದಾರಿ ಸಮುದಾಯಗಳು ಅವರ ಜೊತೆ ಇದ್ದಾರೆ. ಹರಿಪ್ರಸಾದ್ ಪರ ಕೆಲಸ ಮಾಡಲು ನಾವು ಸದಾ ಸಿದ್ಧ.
ಪಕ್ಷ ಅವರನ್ನು ನಿರ್ಲಕ್ಷಿಸುವುದು ತರವಲ್ಲ, ನಿರ್ಲಕ್ಷಿಸಿದರೆ ನಾವು ಸುಮ್ಮನಿರುವುದಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅವರ ಶ್ರಮ ಮತ್ತು ಶ್ರಮವಿದೆ. ರಾಷ್ಟ್ರಮಟ್ಟದಲ್ಲಿ ಬೆಳೆದ ಹರಿಪ್ರಸಾದ್ ಅವರಿಗೆ ಅನ್ಯಾಯವಾದರೆ ಸಮಾಜ ಸಹಿಸುವುದಿಲ್ಲ. ಸಮಯ ಮಿಂಚಿಲ್ಲ. ಈಗಲಾದರೂ ಸೂಕ್ತ ಸಚಿವ ಸ್ಥಾನ ಎಂದು ಒತ್ತಾಯಿಸಿದರು. ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸುತ್ತೇವೆ. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಸುರೇಶ್ಚಂದ್ರ ಕೋಟ್ಯಾನ್ ಅವರೊಂದಿಗೆ ಪ್ರೇಮನಾಥ ಕೆ, ಲೋಕನಾಥ ಪೂಜಾರಿ, ಸುರೇಶ್, ಶೋಭಕೇಶವ್ ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…