ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ.
ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ, ತಾಯಿ ರತ್ನಾವತಿ ಹಾಗೂ ಕುಟುಂಬದವರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದ ಅಧಿಕಾರಿಗಳು ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದು ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಶ್ರೀ ದೇವಳದ ಮುಖ್ಯ ಅರ್ಚಕರು ತೀರ್ಥ ಪ್ರಸಾದ ನೀಡಿ ಅವರನ್ನ ಗೌರವಿಸಿದರು.
ಅಲ್ಲಿಂದ ಕ್ಷೇತ್ರದ ಆರಾಧ್ಯ ದೈವ ಹೊಸಳಿ ಗಮ್ಮನ ಗುಡಿಗೆ ಭೇಟಿ ನೀಡಿ ದೈವದ ದರ್ಶನ ಪಡೆದಿದ್ದಾರೆ. ಕಾಂತಾರ ಚಿತ್ರದ ಮೂಲಕ ಜನಮನಗಳಿಸಿದ ರಿಷಬ್ ಶೆಟ್ಟಿಯವರು ಕುಕ್ಕೆ ಕ್ಷೇತ್ರಕ್ಕೆ ಎರಡನೇ ಬಾರಿ ಆಗಮಿಸಿದ್ದು ದೇವರ ದರ್ಶನ ಪಡೆದು ಧನ್ಯರಾದರು. ಮೊದಲನೇ ಬಾರಿ ಕ್ಷೇತ್ರಕ್ಕೆ ಆಗಮಿಸಿದಾಗ ಇಲ್ಲಿ ತುಲಾಭಾರ ಸೇವೆಯನ್ನು ಕೂಡ ಸಲ್ಲಿಸಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…