ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ.

ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಅವರ ಪತ್ನಿ ಅಲಿಮಾಬಿ ಮೃತಪಟ್ಟ ದುರ್ದೈವಿ. ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಅಲಿಮಾಬಿ ಪಾಲ್ಗೊಂಡಿದ್ದರು. ಸಮಾರಂಭ ಮುಗಿಸಿ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮನೆಗೆ ಮರಳಲು ಇತರ ಮೂವರು ಮಹಿಳೆಯರೊಂದಿಗೆ ರಸ್ತೆ ದಾಟುತ್ತಿದ್ರು, ಈ ಸಂದರ್ಭದಲ್ಲಿ ಮಂಗಳೂರಿನಿಂದ ಬಾದಾಮಿ-ಐಹೊಳೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದು ಮಹಿಳೆಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ತಲೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಅಲಿಮಾಬಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಅಲಿಮಾಬಿ ಅವರಿಗೆ ನಾಲ್ವರು ಗಂಡು ಹಾಗೂ ಓರ್ವ ಪುತ್ರಿ ಇದ್ದಾರೆ. ಇವರಲ್ಲಿ ಒಂದು ಹೆಣ್ಣು ಹಾಗೂ ಓರ್ವ ಗಂಡು ಮಕ್ಕಳು ಬುದ್ಧಿಮಾಂದ್ಯರಾಗಿದ್ದು, ಅಲಿಮಾಬಿ ಅವರೇ ಈ ಇಬ್ಬರು ಮಕ್ಕಳ ಪೋಷಣೆ ಮಾಡುತ್ತಿದ್ದರು. ಹಗಲಿರುಳು ಈ ಮಕ್ಕಳ ಹಾರೈಕೆಯಲ್ಲೇ ತೊಡಗಿದ್ದ ತಾಯಿಯ ಅಗಲಿಕೆಯಿಂದಾಗಿ, ಈಗ ಈ ಅಸಹಾಯಕ ಮಕ್ಕಳು ಸಂಪೂರ್ಣ ಅನಾಥರಾಗಿದ್ದು, ಅವರ ಭವಿಷ್ಯ ಅತಂತ್ರವಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಮರುಕ ಉಂಟುಮಾಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!