ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ.
ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಅವರ ಪತ್ನಿ ಅಲಿಮಾಬಿ ಮೃತಪಟ್ಟ ದುರ್ದೈವಿ. ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದ್ದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಅಲಿಮಾಬಿ ಪಾಲ್ಗೊಂಡಿದ್ದರು. ಸಮಾರಂಭ ಮುಗಿಸಿ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮನೆಗೆ ಮರಳಲು ಇತರ ಮೂವರು ಮಹಿಳೆಯರೊಂದಿಗೆ ರಸ್ತೆ ದಾಟುತ್ತಿದ್ರು, ಈ ಸಂದರ್ಭದಲ್ಲಿ ಮಂಗಳೂರಿನಿಂದ ಬಾದಾಮಿ-ಐಹೊಳೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದು ಮಹಿಳೆಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ತಲೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಅಲಿಮಾಬಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಅಲಿಮಾಬಿ ಅವರಿಗೆ ನಾಲ್ವರು ಗಂಡು ಹಾಗೂ ಓರ್ವ ಪುತ್ರಿ ಇದ್ದಾರೆ. ಇವರಲ್ಲಿ ಒಂದು ಹೆಣ್ಣು ಹಾಗೂ ಓರ್ವ ಗಂಡು ಮಕ್ಕಳು ಬುದ್ಧಿಮಾಂದ್ಯರಾಗಿದ್ದು, ಅಲಿಮಾಬಿ ಅವರೇ ಈ ಇಬ್ಬರು ಮಕ್ಕಳ ಪೋಷಣೆ ಮಾಡುತ್ತಿದ್ದರು. ಹಗಲಿರುಳು ಈ ಮಕ್ಕಳ ಹಾರೈಕೆಯಲ್ಲೇ ತೊಡಗಿದ್ದ ತಾಯಿಯ ಅಗಲಿಕೆಯಿಂದಾಗಿ, ಈಗ ಈ ಅಸಹಾಯಕ ಮಕ್ಕಳು ಸಂಪೂರ್ಣ ಅನಾಥರಾಗಿದ್ದು, ಅವರ ಭವಿಷ್ಯ ಅತಂತ್ರವಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಮರುಕ ಉಂಟುಮಾಡಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…