ಹುಣಸೂರು ತಾಲೂಕಿನ ಹನಗೋಡು ಗ್ರಾಮದ ಫರ್ಮಾನ್ ಪಾಷಾ ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಂಚವಳ್ಳಿ ಗ್ರಾಮದಲ್ಲಿ ಕಾರ್ ಗ್ಯಾರೇಜ್ ನಡೆಸುತ್ತಿದ್ದ ಫರ್ಮಾನ್ ಪಾಷಾ, ಮೈಸೂರಿನ ಬಿಳಿಕೆರೆ ಗ್ರಾಮದ ಆಫ್ರಿನ್ ಮತ್ತು ಆಕೆಯ ಸಹೋದರ ಸಲ್ಮಾನ್ ರನ್ನು ಭೇಟಿ ಮಾಡಲು ಹೋಗುತ್ತಿರುವುದಾಗಿ ತಂದೆಗೆ ತಿಳಿಸಿ ಮನೆಯಿಂದ ಹೊರಟಿದ್ದರು. ಬಳಿಕ ಫರ್ಮಾನ್ ಪಾಷಾ, ಜಾಜಿರ್ ಎಂಬ ವ್ಯಕ್ತಿಯ ಮೂಲಕ ದೂರವಾಣಿ ಕರೆ ಮಾಡಿ ತನ್ನ ಸ್ನೇಹಿತರಿಗೆ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾನೆ.

ನಂತರ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಈ ಕುರಿತು ಮೃತನ ತಂದೆ ಮುನೀರ್ ಪಾಷಾ ಅವರು ನನ್ನ ಮಗನ ಸಾವಿನ ಬಗ್ಗೆ ಅನುಮಾನವಿದೆ. ಸೂಕ್ತ ತನಿಖೆ ನಡೆಸಿ ಎಂದು ಆಗ್ರಹಿಸಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಬಿಳಿಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.



