ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಏಪ್ರಿಲ್ 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.

ಕಾರ್ಯಕ್ರಮವನ್ನು ಹೇರಂಭ ಇಂಡಸ್ಟ್ರೀಸ್ ಸಂಸ್ಥಾಪಕಾಧ್ಯಕ್ಷರು ಹಾಗೂ ಸೇವಾ ಬಳಗದ ಕೇಂದ್ರೀಯ ಸಮಿತಿ ಅಧ್ಯಕ್ಷ ಡಾ. ಸದಾಶಿವ ಕೆ. ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಪಾಧ್ಯಕ್ಷ ನಾರಾಯಣ ನೈಕ್ ನಡುಹಿತ್ಲು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈಸ್ ಚಾನ್ಸಲರ್ ಡಾ. ಸತೀಶ್ ಭಂಡಾರಿ, ಖ್ಯಾತ ಎಲುಬು ತಜ್ಞ ಡಾ. ಅಶ್ವಿನ್ ಶೆಟ್ಟಿ, ಡಾ. ವಿಕ್ರಮ್ ದತ್ತ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಘಟನೆಯ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಮೀಂಜ ಗ್ರಾಮ ಪಂಚಾಯತ್ ಸದಸ್ಯೆ ಶರ್ಮಿಳಾ ಎಂ. ಶೆಟ್ಟಿ, ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾಲತಿ ಹಾಗೂ ಡಾ. ಪುನೀತ ಶೆಟ್ಟಿ ಉಪಸ್ಥಿತರಿರುವರು. ಶಿಬಿರದಲ್ಲಿ ಎಲುಬು ಮತ್ತು ಕೀಲು ಚಿಕಿತ್ಸೆ, ಕಣ್ಣು, ಚರ್ಮ ಹಾಗೂ ಮಕ್ಕಳ ಚಿಕಿತ್ಸೆಯೊಂದಿಗೆ ಇಸಿಜಿ, ಇಎನ್‌ಟಿ ಮತ್ತು ಜನರಲ್ ಮೆಡಿಸಿನ್ ವಿಭಾಗಗಳಲ್ಲಿ ತಜ್ಞರಿಂದ ಉಚಿತ ತಪಾಸಣೆ ನಡೆಯಲಿದೆ. ಅಗತ್ಯ ಔಷಧಿ ಹಾಗೂ ಕನ್ನಡಕ ವಿತರಣೆ ನಡೆಯಲಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!