ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಎ.16ರಂದು ಅಬ್ಬಾಸ್ ವಿದೇಶದಿಂದ ಹಿಂತಿರುಗುವಾಗ ಇಮಿಗ್ರೇಶನ್ ವಿಭಾಗದ ಸಹಕಾರದಿಂದ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಮೋಹನ ಮತ್ತು ವೆಂಕಪ್ಪ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.



