ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಹೃದಯ ರೋಗ ಚಿಕಿತ್ಸಾ ವಿಭಾಗದ ಡಾ. ಎಚ್. ಪ್ರಭಾಕರ್ ನೇತೃತ್ವದ ತಜ್ಞ್ ವೈದ್ಯರ ತಂಡ ಮಿಡಿತ ಇಲ್ಲದ ಖಾಯಿಲೆ ಎಂದು ಕರೆಯಲ್ಪಡುವ ಅಪರೂಪದ ಖಾಯಿಲೆ ಬಾಧಿತ ಮಹಿಳೆಗೆ ತುರ್ತು ಚಿಕಿತ್ಸೆ ನಡೆಸಿ ಜೀವ ಉಳಿಸಿದೆ. ಸಾಮಾನ್ಯವಾಗಿ ನಲವತ್ತರ ಆಸುಪಾಸಿನ ಮಹಿಳೆಯರಲ್ಲಿ ಕಂಡು ಬರುವ ಟಕಾಯಸು ಖಾಯಿಲೆ ಹೃದಯದ ಸ್ನಾಯುಗಳಿಗೆ ರಕ್ತ ಪೂರೈಕೆಯನ್ನು ತಡೆಯುತ್ತದೆ. ಇದರಿಂದ ರೋಗಿಗಳಲ್ಲಿ ಉಸಿರಾಟದ ಸಮಸ್ಯೆ ಉಂಟಾಗುತ್ತದೆ.
ಫಾದರ್ ಮುಲ್ಲರ್ ವೈದ್ಯರ ತಂಡ ಆಧುನಿಕ ತಂತ್ರಜ್ಞಾನ ಬಳಸಿ ಕನಿಷ್ಠ ಗಾಯಗಳೊಂದಿಗೆ ರಕ್ತ ನಾಳಗಳನ್ನು ತೆರೆದು ಹೃದಯಕ್ಕೆ ರಕ್ತ ಪೂರೈಕೆಯನ್ನು ಸುಗಮಗೊಳಿಸುವ ಮೂಲಕ ಕಾಸರಗೋಡು ಜಿಲ್ಲೆಯ ೪೬ರ ಹರೆಯದ ಮಹಿಳೆಯ ಜೀವ ಉಳಿಸಿದೆ. ಇದು ಅತ್ಯಂತ ಅಪರೂಪದ ಮತ್ತು ವಿಶಿಷ್ಟವಾದ ಕೊರೋನರಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯಾಗಿದ್ದು, ವೈದ್ಯರ ತಂಡ ತ್ರುರ್ತಾಗಿ ಕೈಗೊಂಡಿದೆ.
ಈ ರೋಗ ಬಾಧಿತರಲ್ಲಿ ಉಸಿರಾಟದ ಸಮಸ್ಯೆಯ ಜೊತೆ ಆಯಾಸ, ಚಲನೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡು ಬರುತ್ತವೆ. ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದ ರೋಗಿಯಲ್ಲಿ ಅಪರೂಪದ ಖಾಯಿಲೆಗಳ ಲಕ್ಷಣಗಳನ್ನು ವಿವರವಾದ ಕ್ಲಿನಿಕಲ್ ಪರೀಕ್ಷೆಯಲ್ಲಿ ಗಮನಿಸಿದ ಡಾ. ಪ್ರಭಾಕರ್ ಅವರು ಹೃದಯದ ಸ್ನಾಯುಗಳಿಗೆ ರಕ್ತ ಪೂರೈಕೆಯಾಗುವ ಎರಡೂ ಅಪಧಮನಿಗಳಲ್ಲಿ ಅಡೆತಡೆಗಳು ಇರುವುದನ್ನು ಪತ್ತೆ ಹಚ್ಚಿದರು. ಚಿಕಿತ್ಸೆಗಾಗಿ ಅಂತರಶಿಸ್ತೀಯ ತಜ್ಞ್ ವೈದ್ಯರ ತಂಡವನ್ನು ರೂಪಿಸಿ ಚಿಕಿತ್ಸೆ ನೀಡಿದರು. ಡಾ. ಅಶೋಕ, ಡಾ. ಪ್ರದೀಪ ಪಿರೇರಾ, ಡಾ. ಜೋಸ್ಟಲ್ ಪಿಂಟೋ ಅವರನ್ನು ಒಳಗೊಂಡ ನುರಿತ ವೈದ್ಯರ ತಂಡ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಕೈಗೊಂಡು ರೋಗಿಯ ಜೀವ ರಕ್ಷಣೆ ಮಾಡಿದೆ.
ಇಮೇಜಿಂಗ್ ತಂತ್ರಜ್ಞಾನ ಮತ್ತು ವಿಶೇಷ ಬಲೂನ್ ತಂತ್ರಜ್ಞಾನ ಬಳಸಿ ಕೊರೊನರಿ ಆಂಜಿಯೋಪ್ಲಾಸ್ಟಿ ನಡೆಸಲಾಗಿದೆ ಎರಡು ಹಂತಗಳಲ್ಲಿ ಚಿಕಿತ್ಸೆ ನೀಡಲಾಗಿದ್ದು, ರೋಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಆರೋಗ್ಯದ ಜೀವನ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆ ಹೇಳಿದೆ. ವೈದ್ಯರ ತಂಡದ ಪರಿಶ್ರಮ ಯಶಸ್ವಿಯಾಗಿರುವುದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ರೆವೆರೆಂಡ್ ಫಾದರ್ ಫೌಸಿನ್ ಲೂಕಸ್ ಲೋಬೋ ವೈದ್ಯರನ್ನು ಅಭಿನಂದಿಸಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…
ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು…