ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಹೃದಯ ರೋಗ ಚಿಕಿತ್ಸಾ ವಿಭಾಗದ ಡಾ. ಎಚ್. ಪ್ರಭಾಕರ್ ನೇತೃತ್ವದ ತಜ್ಞ್ ವೈದ್ಯರ ತಂಡ ಮಿಡಿತ ಇಲ್ಲದ ಖಾಯಿಲೆ ಎಂದು ಕರೆಯಲ್ಪಡುವ ಅಪರೂಪದ ಖಾಯಿಲೆ ಬಾಧಿತ ಮಹಿಳೆಗೆ ತುರ್ತು ಚಿಕಿತ್ಸೆ ನಡೆಸಿ ಜೀವ ಉಳಿಸಿದೆ. ಸಾಮಾನ್ಯವಾಗಿ ನಲವತ್ತರ ಆಸುಪಾಸಿನ ಮಹಿಳೆಯರಲ್ಲಿ ಕಂಡು ಬರುವ ಟಕಾಯಸು ಖಾಯಿಲೆ ಹೃದಯದ ಸ್ನಾಯುಗಳಿಗೆ ರಕ್ತ ಪೂರೈಕೆಯನ್ನು ತಡೆಯುತ್ತದೆ. ಇದರಿಂದ ರೋಗಿಗಳಲ್ಲಿ ಉಸಿರಾಟದ ಸಮಸ್ಯೆ ಉಂಟಾಗುತ್ತದೆ.
ಫಾದರ್ ಮುಲ್ಲರ್ ವೈದ್ಯರ ತಂಡ ಆಧುನಿಕ ತಂತ್ರಜ್ಞಾನ ಬಳಸಿ ಕನಿಷ್ಠ ಗಾಯಗಳೊಂದಿಗೆ ರಕ್ತ ನಾಳಗಳನ್ನು ತೆರೆದು ಹೃದಯಕ್ಕೆ ರಕ್ತ ಪೂರೈಕೆಯನ್ನು ಸುಗಮಗೊಳಿಸುವ ಮೂಲಕ ಕಾಸರಗೋಡು ಜಿಲ್ಲೆಯ ೪೬ರ ಹರೆಯದ ಮಹಿಳೆಯ ಜೀವ ಉಳಿಸಿದೆ. ಇದು ಅತ್ಯಂತ ಅಪರೂಪದ ಮತ್ತು ವಿಶಿಷ್ಟವಾದ ಕೊರೋನರಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯಾಗಿದ್ದು, ವೈದ್ಯರ ತಂಡ ತ್ರುರ್ತಾಗಿ ಕೈಗೊಂಡಿದೆ.
ಈ ರೋಗ ಬಾಧಿತರಲ್ಲಿ ಉಸಿರಾಟದ ಸಮಸ್ಯೆಯ ಜೊತೆ ಆಯಾಸ, ಚಲನೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡು ಬರುತ್ತವೆ. ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದ ರೋಗಿಯಲ್ಲಿ ಅಪರೂಪದ ಖಾಯಿಲೆಗಳ ಲಕ್ಷಣಗಳನ್ನು ವಿವರವಾದ ಕ್ಲಿನಿಕಲ್ ಪರೀಕ್ಷೆಯಲ್ಲಿ ಗಮನಿಸಿದ ಡಾ. ಪ್ರಭಾಕರ್ ಅವರು ಹೃದಯದ ಸ್ನಾಯುಗಳಿಗೆ ರಕ್ತ ಪೂರೈಕೆಯಾಗುವ ಎರಡೂ ಅಪಧಮನಿಗಳಲ್ಲಿ ಅಡೆತಡೆಗಳು ಇರುವುದನ್ನು ಪತ್ತೆ ಹಚ್ಚಿದರು. ಚಿಕಿತ್ಸೆಗಾಗಿ ಅಂತರಶಿಸ್ತೀಯ ತಜ್ಞ್ ವೈದ್ಯರ ತಂಡವನ್ನು ರೂಪಿಸಿ ಚಿಕಿತ್ಸೆ ನೀಡಿದರು. ಡಾ. ಅಶೋಕ, ಡಾ. ಪ್ರದೀಪ ಪಿರೇರಾ, ಡಾ. ಜೋಸ್ಟಲ್ ಪಿಂಟೋ ಅವರನ್ನು ಒಳಗೊಂಡ ನುರಿತ ವೈದ್ಯರ ತಂಡ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಕೈಗೊಂಡು ರೋಗಿಯ ಜೀವ ರಕ್ಷಣೆ ಮಾಡಿದೆ.
ಇಮೇಜಿಂಗ್ ತಂತ್ರಜ್ಞಾನ ಮತ್ತು ವಿಶೇಷ ಬಲೂನ್ ತಂತ್ರಜ್ಞಾನ ಬಳಸಿ ಕೊರೊನರಿ ಆಂಜಿಯೋಪ್ಲಾಸ್ಟಿ ನಡೆಸಲಾಗಿದೆ ಎರಡು ಹಂತಗಳಲ್ಲಿ ಚಿಕಿತ್ಸೆ ನೀಡಲಾಗಿದ್ದು, ರೋಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಆರೋಗ್ಯದ ಜೀವನ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆ ಹೇಳಿದೆ. ವೈದ್ಯರ ತಂಡದ ಪರಿಶ್ರಮ ಯಶಸ್ವಿಯಾಗಿರುವುದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ರೆವೆರೆಂಡ್ ಫಾದರ್ ಫೌಸಿನ್ ಲೂಕಸ್ ಲೋಬೋ ವೈದ್ಯರನ್ನು ಅಭಿನಂದಿಸಿದ್ದಾರೆ.
ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ…
ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು,…
ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ…
ಛಾವಣಿಯ ಶೀಟ್ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ…
ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್…
ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.…