ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ದಿಶಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಜೀವನ್ ಮಿಷನ್ ಹಾಗೂ ಆಯುಷ್ಮಾನ್ ಭಾರತ್ ಯೋಜನೆಗಳ ಜಾರಿಯಲ್ಲಿ ರಾಜ್ಯ ಸರ್ಕಾರ ಅಸಡ್ಡೆ ತೋರಿಸುತ್ತಿದೆ ಎಂದು ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಕುರಿತು ತಪ್ಪು ಮಾಹಿತಿ ನೀಡುವುದರಿಂದ ಮಹಿಳೆಯರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಅವರು, ಇದೇ ರೀತಿಯಲ್ಲಿ ಕೇಂದ್ರದ ಯೋಜನೆಗಳ ಜಾರಿಯಲ್ಲಿಯೂ ಜನರಿಗೆ ಅನ್ಯಾಯವಾಗಬಾರದು ಎಂದು ಎಚ್ಚರಿಸಿದ್ದಾರೆ. ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ…
ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು,…
ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ…
ಛಾವಣಿಯ ಶೀಟ್ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ…
ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್…
ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.…