ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ ತೀವ್ರ ಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ.
ಮೃತ ಸಾತ್ವಿ ತನ್ನ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾಳೆ. ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಾಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ. ದೂರವಷ್ಟೇ ಬಾಕಿ ಇತ್ತು. ಸ್ಕೂಟಿ ಸವಾರ ನಿತ್ಯಾನಂದ ಶೆಟ್ಟಿ ಅವರಿಗೂ ಗಾಯಗಳಾಗಿವೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…