ಹೋಟೆಲ್ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ.
ತೆಕ್ಕಲಕೋಟೆಯ ಈರಣ್ಣ ಎನ್ನುವವರಿಗೆ ಸೇರಿದ ಹೋಟೆಲ್ನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಹೋಟೆಲ್ನಲ್ಲಿ ಈರಣ್ಣನ ಕುಟುಂಬಸ್ಥರು 9 ಜನ ಮಲಗಿದ್ದರು ಎನ್ನಲಾಗಿದೆ. 9 ಜನರ ಪೈಕಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ವರ್ಷದ ಶ್ರೀನಿವಾಸ್ಗೆ ಗಾಯಗಳಾಗಿವೆ. ಗಾಯಾಳು ಬಾಲಕನನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಉಳಿದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಹೋಟೆಲ್ನಲ್ಲಿನ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿದ್ದು, ಜೀವನೋಪಾಯಕ್ಕೆ ಇದ್ದ ಹೊಟೇಲ್ಗೆ ಬೆಂಕಿ ಬಿದ್ದಿದ್ದರಿಂದ ಹೋಟೆಲ್ ಮಾಲೀಕರು ಕಂಗಾಲಾಗಿದ್ದಾರೆ. ಸಿಲಿಂಡರ್ ಬ್ಲಾಸ್ಟ್ ಆದ ಹೋಟೆಲ್ನ ಅಕ್ಕಪಕ್ಕದ ಎರಡ್ಮೂರು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದ ಪರಿಣಾಮ, ಟೈಯರ್ ಅಂಗಡಿಯೂ ಹೊತ್ತಿ ಉರಿದಿದೆ. ಘಟನೆ ಸಂಬಂಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…
ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ…
ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯ ಹಿಂಭಾಗದ ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತದೇಹ…
ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ…
ಮುಂಡತಿಕ್ಕೋಡುವಿನ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ ನಂತರ, ತ್ರಿಶೂರ್ ಪೂರಂ ಉತ್ಸವದ ಪಟಾಕಿ…
ಅಚಾನಕ್ ಆಗಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಗಳೂರಿನ ಅತ್ತಾವರ ಬಳಿಯ ಅಯಪ್ಪ ಮಂದಿರದ ಮುಂಭಾಗ ತಡೆಗೋಡೆ ಕುಸಿದು ಬಿದ್ದ ಕಾರಣ…