ಹೋಟೆಲ್ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ.
ತೆಕ್ಕಲಕೋಟೆಯ ಈರಣ್ಣ ಎನ್ನುವವರಿಗೆ ಸೇರಿದ ಹೋಟೆಲ್ನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಹೋಟೆಲ್ನಲ್ಲಿ ಈರಣ್ಣನ ಕುಟುಂಬಸ್ಥರು 9 ಜನ ಮಲಗಿದ್ದರು ಎನ್ನಲಾಗಿದೆ. 9 ಜನರ ಪೈಕಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ವರ್ಷದ ಶ್ರೀನಿವಾಸ್ಗೆ ಗಾಯಗಳಾಗಿವೆ. ಗಾಯಾಳು ಬಾಲಕನನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಉಳಿದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಹೋಟೆಲ್ನಲ್ಲಿನ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿದ್ದು, ಜೀವನೋಪಾಯಕ್ಕೆ ಇದ್ದ ಹೊಟೇಲ್ಗೆ ಬೆಂಕಿ ಬಿದ್ದಿದ್ದರಿಂದ ಹೋಟೆಲ್ ಮಾಲೀಕರು ಕಂಗಾಲಾಗಿದ್ದಾರೆ. ಸಿಲಿಂಡರ್ ಬ್ಲಾಸ್ಟ್ ಆದ ಹೋಟೆಲ್ನ ಅಕ್ಕಪಕ್ಕದ ಎರಡ್ಮೂರು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದ ಪರಿಣಾಮ, ಟೈಯರ್ ಅಂಗಡಿಯೂ ಹೊತ್ತಿ ಉರಿದಿದೆ. ಘಟನೆ ಸಂಬಂಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…