ಕಾರವಾರ – ಮಂಗಳೂರು- ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅದೇ ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ ಘಟನೆ ಮಂಗಳೂರಿನ ಬಂಟ್ವಾಳ ಸಮೀಪದ ಬಿಸಿರೋಡ್ ಬಳಿ ನಡೆದಿದೆ.
ಮಂಗಳೂರು ಜಂಕ್ಷನ್ನಿಂದ ಹೊರಟ ರೈಲಿನಲ್ಲಿ ಮೈಸೂರು ಮೂಲದ ತುಂಬು ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿದೆ. ರೈಲು ಬಿ.ಸಿ.ರೋಡ್ ತಲುಪಿದಾಗ ಗರ್ಭಿಣಿಗೆ ತೀವ್ರ ರಕ್ತಸ್ರಾವವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಿ ಸುಮಾರು 30 ನಿಮಿಷಗಳ ಕಾಲ ವೈದ್ಯರಿಗಾಗಿ ಕಾಯಲಾಯಿತು.
ಆದರೆ ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಲಭಿಸದ ಕಾರಣ ರೈಲಿನಲ್ಲಿದ್ದ ಇಬ್ಬರು ಮಹಿಳೆಯರು ಧೈರ್ಯದಿಂದಲೇ ಹೆರಿಗೆ ಮಾಡಿಸಲು ಮುಂದಾದರು. ತಕ್ಷಣ ಅವರು ರೈಲಿನ ಬೋಗಿಗೆ ಪರದೆ ಕಟ್ಟಿ ಹೆರಿಗೆಗಾಗಿ ಪ್ರಯತ್ನಿಸಿದರು. ರಕ್ತಸ್ರಾವವಾಗುತ್ತಿದ್ದರೂ ಧೃತಿಗೆಡದೆ ಪ್ರಯತ್ನ ಮುಂದುವರಿಸಿದರು. ಅವರೊಂದಿಗೆ ರೈಲಿನಲ್ಲಿದ್ದ ಇತರ ಮಹಿಳೆಯರೂ ಸಹಕರಿಸಿದರು. ಕೊನೆಗೂ ಸಹಜ ಹೆರಿಗೆ ಮಾಡಿಸುವಲ್ಲಿ ಮಹಿಳೆಯರ ತಂಡ ಯಶಸ್ವಿಯಾಯಿತು. ಬಳಿಕ ತಾಯಿ-ಮಗುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. **
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು…
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…