ಕಾರವಾರ – ಮಂಗಳೂರು- ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅದೇ ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ ಘಟನೆ ಮಂಗಳೂರಿನ ಬಂಟ್ವಾಳ ಸಮೀಪದ ಬಿಸಿರೋಡ್ ಬಳಿ ನಡೆದಿದೆ.
ಮಂಗಳೂರು ಜಂಕ್ಷನ್ನಿಂದ ಹೊರಟ ರೈಲಿನಲ್ಲಿ ಮೈಸೂರು ಮೂಲದ ತುಂಬು ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿದೆ. ರೈಲು ಬಿ.ಸಿ.ರೋಡ್ ತಲುಪಿದಾಗ ಗರ್ಭಿಣಿಗೆ ತೀವ್ರ ರಕ್ತಸ್ರಾವವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಿ ಸುಮಾರು 30 ನಿಮಿಷಗಳ ಕಾಲ ವೈದ್ಯರಿಗಾಗಿ ಕಾಯಲಾಯಿತು.
ಆದರೆ ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಲಭಿಸದ ಕಾರಣ ರೈಲಿನಲ್ಲಿದ್ದ ಇಬ್ಬರು ಮಹಿಳೆಯರು ಧೈರ್ಯದಿಂದಲೇ ಹೆರಿಗೆ ಮಾಡಿಸಲು ಮುಂದಾದರು. ತಕ್ಷಣ ಅವರು ರೈಲಿನ ಬೋಗಿಗೆ ಪರದೆ ಕಟ್ಟಿ ಹೆರಿಗೆಗಾಗಿ ಪ್ರಯತ್ನಿಸಿದರು. ರಕ್ತಸ್ರಾವವಾಗುತ್ತಿದ್ದರೂ ಧೃತಿಗೆಡದೆ ಪ್ರಯತ್ನ ಮುಂದುವರಿಸಿದರು. ಅವರೊಂದಿಗೆ ರೈಲಿನಲ್ಲಿದ್ದ ಇತರ ಮಹಿಳೆಯರೂ ಸಹಕರಿಸಿದರು. ಕೊನೆಗೂ ಸಹಜ ಹೆರಿಗೆ ಮಾಡಿಸುವಲ್ಲಿ ಮಹಿಳೆಯರ ತಂಡ ಯಶಸ್ವಿಯಾಯಿತು. ಬಳಿಕ ತಾಯಿ-ಮಗುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. **
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…