ಪ್ರತಿಷ್ಟಿತ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬಳ ಮೃ*ತದೇಹ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಪೂಜಾ ದತ್ತಾ ಮೃತ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಎರಡೂವರೆ ವರ್ಷದಿಂದ ಆಡುಗೋಡಿಯಲ್ಲಿ ಬಾಡಿಗೆ ಮನೆಯಲ್ಲಿ ಪೂಜಾ ವಾಸವಾಗಿದ್ದಳು. ಆದರೆ ಇದ್ದಕ್ಕಿದ್ದಂತೆ ಪೂಜಾ ವಾಸವಿದ್ದ ಮನೆಯಲ್ಲಿ ವಾಸನೆ ಬರಲು ಶುರುವಾದ ಕಾರಣ ಮನೆ ಮಾಲಕಿ ಬಾಗಿಲು ಒಡೆಸಿ ನೋಡಿದ್ದಾರೆ. ಈ ವೇಳೆ, ಬೆತ್ತಲಾಗಿ, ಕೊಳೆತು ಹೋದ ಸ್ಥಿತಿಯಲ್ಲಿ ಪೂಜಾ ಶವ ಪತ್ತೆಯಾಗಿದೆ. ಅವಿವಾಹಿತೆಯಾಗಿದ್ದ ಪೂಜಾಳನ್ನು ನೋಡಲು ಓರ್ವ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದನಂತೆ. ಆತನೊಂದಿಗೆ ಪೂಜಾ ಸದಾ ಜಗಳವಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಮನೆ ಪರಿಶೀಲನೆ ವೇಳೆ ಖಾಸಗಿ ಕಂಪನಿಯ ಐ.ಡಿ ಕಾರ್ಡ್, ರೂಂ ತುಂಬಾ ಕೆಲ ಪೇಪರ್ಸ್ ಹರಿದು ಹಾಕಿರೋದು ಪತ್ತೆಯಾಗಿದೆ. ತನಿಖೆಯ ಬಳಿಕ ಇದು ಆ*ತ್ಮಹತ್ಯೆಯೋ ಕೊ*ಲೆಯೋ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಾಗಿದೆ
ನಂದಿನಿ ಲೇಔಟ್ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದ…
ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ…
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು…
ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಮೃತದೇಹ ಪತ್ತೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್…
ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ. ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ…
ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ…