ಪ್ರತಿಷ್ಟಿತ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬಳ ಮೃ*ತದೇಹ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಪೂಜಾ ದತ್ತಾ ಮೃತ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಎರಡೂವರೆ ವರ್ಷದಿಂದ ಆಡುಗೋಡಿಯಲ್ಲಿ ಬಾಡಿಗೆ ಮನೆಯಲ್ಲಿ ಪೂಜಾ ವಾಸವಾಗಿದ್ದಳು. ಆದರೆ ಇದ್ದಕ್ಕಿದ್ದಂತೆ ಪೂಜಾ ವಾಸವಿದ್ದ ಮನೆಯಲ್ಲಿ ವಾಸನೆ ಬರಲು ಶುರುವಾದ ಕಾರಣ ಮನೆ ಮಾಲಕಿ ಬಾಗಿಲು ಒಡೆಸಿ ನೋಡಿದ್ದಾರೆ. ಈ ವೇಳೆ, ಬೆತ್ತಲಾಗಿ, ಕೊಳೆತು ಹೋದ ಸ್ಥಿತಿಯಲ್ಲಿ ಪೂಜಾ ಶವ ಪತ್ತೆಯಾಗಿದೆ. ಅವಿವಾಹಿತೆಯಾಗಿದ್ದ ಪೂಜಾಳನ್ನು ನೋಡಲು ಓರ್ವ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದನಂತೆ. ಆತನೊಂದಿಗೆ ಪೂಜಾ ಸದಾ ಜಗಳವಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಮನೆ ಪರಿಶೀಲನೆ ವೇಳೆ ಖಾಸಗಿ ಕಂಪನಿಯ ಐ.ಡಿ ಕಾರ್ಡ್, ರೂಂ ತುಂಬಾ ಕೆಲ ಪೇಪರ್ಸ್ ಹರಿದು ಹಾಕಿರೋದು ಪತ್ತೆಯಾಗಿದೆ. ತನಿಖೆಯ ಬಳಿಕ ಇದು ಆ*ತ್ಮಹತ್ಯೆಯೋ ಕೊ*ಲೆಯೋ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಾಗಿದೆ
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…