ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ವರದಿಯಾಗಿದೆ.
40 ವರ್ಷದ ಅಬ್ದುಲ್ಲಾ ಡೋಕಾಡಿಯಾ, ಅವರ ಪತ್ನಿ 35 ವರ್ಷದ ನಸೀನ್ ಡೋಕಾಡಿಯಾ, ಅವರ ಪುತ್ರಿಯರಾದ 16 ವರ್ಷದ ಆಯಿಶಾ ಹಾಗೂ 13 ವರ್ಷದ ಜೈನಾಬ್ ಮೃ*ತಪಟ್ಟವರು. ಏಪ್ರಿಲ್ 25ರಂದು ರಾತ್ರಿ ಸುಮಾರು 10:30ಕ್ಕೆ ಸಂಬಂಧಿಕರು ಸೇರಿದಂತೆ ಒಟ್ಟು ಒಂಬತ್ತು ಮಂದಿ ಒಟ್ಟಾಗಿ ಬಿರಿಯಾನಿ ಊಟ ಮಾಡಿದ್ದರು. ಊಟದ ನಂತರ ಸಂಬಂಧಿಕರು ತಮ್ಮ ಮನೆಗಳಿಗೆ ಮರಳಿದ್ದರು. ಆದರೆ ಅಬ್ದುಲ್ಲಾ ಅವರ ಕುಟುಂಬದ ನಾಲ್ವರು ಸದಸ್ಯರು ತಡರಾತ್ರಿ 1 ಗಂಟೆಯ ಬಳಿಕ ಕಲ್ಲಂಗಡಿ ಹಣ್ಣನ್ನು ಸೇವಿಸಿದ್ದರು ಎಂದು ತಿಳಿದುಬಂದಿದೆ. ಏಪ್ರಿಲ್ 26 ರ ಮುಂಜಾನೆ 5:30 ರ ಸುಮಾರಿಗೆ ನಾಲ್ವರಿಗೂ ತೀವ್ರ ವಾಂತಿ ಮತ್ತು ಬೇಧಿ ಶುರುವಾಗಿದೆ. ತಕ್ಷಣ ಅವರನ್ನು ವೈದ್ಯರ ಬಳಿ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಾಲ್ವರೂ ಕೊನೆಯುಸಿರೆಳೆದಿದ್ದಾರೆ. ಇನ್ನು ಇವರ ಸಾವಿನ ನಿಖರ ಕಾರಣವೇನು ಎಂಬುದು ತನಿಖೆಯಲ್ಲಿ ತಿಳಿದು ಬರಬೇಕಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…