ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ವರದಿಯಾಗಿದೆ.
40 ವರ್ಷದ ಅಬ್ದುಲ್ಲಾ ಡೋಕಾಡಿಯಾ, ಅವರ ಪತ್ನಿ 35 ವರ್ಷದ ನಸೀನ್ ಡೋಕಾಡಿಯಾ, ಅವರ ಪುತ್ರಿಯರಾದ 16 ವರ್ಷದ ಆಯಿಶಾ ಹಾಗೂ 13 ವರ್ಷದ ಜೈನಾಬ್ ಮೃ*ತಪಟ್ಟವರು. ಏಪ್ರಿಲ್ 25ರಂದು ರಾತ್ರಿ ಸುಮಾರು 10:30ಕ್ಕೆ ಸಂಬಂಧಿಕರು ಸೇರಿದಂತೆ ಒಟ್ಟು ಒಂಬತ್ತು ಮಂದಿ ಒಟ್ಟಾಗಿ ಬಿರಿಯಾನಿ ಊಟ ಮಾಡಿದ್ದರು. ಊಟದ ನಂತರ ಸಂಬಂಧಿಕರು ತಮ್ಮ ಮನೆಗಳಿಗೆ ಮರಳಿದ್ದರು. ಆದರೆ ಅಬ್ದುಲ್ಲಾ ಅವರ ಕುಟುಂಬದ ನಾಲ್ವರು ಸದಸ್ಯರು ತಡರಾತ್ರಿ 1 ಗಂಟೆಯ ಬಳಿಕ ಕಲ್ಲಂಗಡಿ ಹಣ್ಣನ್ನು ಸೇವಿಸಿದ್ದರು ಎಂದು ತಿಳಿದುಬಂದಿದೆ. ಏಪ್ರಿಲ್ 26 ರ ಮುಂಜಾನೆ 5:30 ರ ಸುಮಾರಿಗೆ ನಾಲ್ವರಿಗೂ ತೀವ್ರ ವಾಂತಿ ಮತ್ತು ಬೇಧಿ ಶುರುವಾಗಿದೆ. ತಕ್ಷಣ ಅವರನ್ನು ವೈದ್ಯರ ಬಳಿ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಾಲ್ವರೂ ಕೊನೆಯುಸಿರೆಳೆದಿದ್ದಾರೆ. ಇನ್ನು ಇವರ ಸಾವಿನ ನಿಖರ ಕಾರಣವೇನು ಎಂಬುದು ತನಿಖೆಯಲ್ಲಿ ತಿಳಿದು ಬರಬೇಕಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…