ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಹೆರ್ಗಾ ಗ್ರಾಮದ ನಾರಾಯಣ ಪೂಜಾರಿ ಎಂಬವರ ಮಗ ಸುಜಿತ್ ಕುಮಾರ್ ಎಂದು ಗುರುತಿಸಲಾಗಿದೆ. ರಿಕ್ಷಾದಲ್ಲಿ ಬಾಡಿಗೆ ಕೆಲಸ ಮಾಡಿಕೊಂಡಿದ್ದ ಇವರು, ಕೆಲಸಕ್ಕೆ ಮನೆಯಿಂದ ಹೋಗಿದ್ದರು. ಬಳಿಕ ಅವರು ಹೋಳೆಬಾಗಿಲು ನದಿಗೆ ಈಜಲು ಹೋಗಿದ್ದು, ಅಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದಾಗ ಬೆಳಗ್ಗೆ 7 ಗಂಟೆ ಸುಮಾರಿಗೆ ನದಿಯ ಕಿನಾರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



