ನಂದಿನಿ ಲೇಔಟ್ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯ ಮುಂಭಾಗದ ಮರಗಳು ಹಾಗೂ ಕಬ್ಬಿಣದ ಗೇಟ್ಗಳು ಕೂಡ ಹೊತ್ತಿ ಉರಿದಿವೆ. ಗೋಡೌನ್ ಪಕ್ಕದಲ್ಲೇ ಸುಮಾರು 50 ಯುವತಿಯರು ವಾಸವಿದ್ದ ಲೇಡಿಸ್ ಪಿಜಿ ಇತ್ತು. ಬೆಂಕಿಯ ಕೆನ್ನಾಲಿಗೆ ಮತ್ತು ದಟ್ಟ ಹೊಗೆ ಪಿಜಿಯ ಒಳಗೂ ಆವರಿಸುತ್ತಿದ್ದಂತೆ ಯುವತಿಯರು ತೀವ್ರ ಗಾಬರಿಗೊಂಡಿದ್ದಾರೆ.
ಹೊರಗೆ ಬರಲು ದಾರಿಯಿಲ್ಲದೆ ಆತಂಕಗೊಂಡ ಕೆಲ ಯುವತಿಯರು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ. ಇನ್ನೂ ಕೆಲವರು ಪ್ರಾಣ ಉಳಿಸಿಕೊಳ್ಳಲು ಪಿಜಿಯ ಕಂಪೌಂಡ್ ಗೋಡೆ ಹಾರಿ ಹೊರಬಂದಿದ್ದಾರೆ. ಗೋಡೆ ಹಾರುವ ಮತ್ತು ಜಿಗಿಯುವ ಸಂದರ್ಭದಲ್ಲಿ ಕೆಲವು ಯುವತಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…