ಹುಣಸೂರು: ನಾಗರಹೊಳೆ ಉದ್ಯಾನದಲ್ಲಿ ಜಿಂಕೆಯನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೋಪಿಗಳನ್ನು ಬಂಧಿಸಿರುವ ಘಟನೆ ಏಪ್ರಿಲ್ 28 ರ ಮಂಗಳವಾರ ನಡೆದಿದ್ದು, ಅರಣ್ಯಾಧಿಕಾರಿಗಳು ಕೃತ್ಯಕ್ಕೆ ಬಳಸಿದ್ದ ಪರಿಕರಗಳನ್ನು ವಶಪಡಿಸಿಕೊಂಡಿರುವ ಘಟನೆ ವೀರನಹೊಸಳ್ಳಿ ವಲಯದಲ್ಲಿ ನಡೆದಿದೆ.
ತಾಲೂಕಿನ ಹನಗೋಡು ಹೋಬಳಿಯ ಶಿಂಡೇನಹಳ್ಳಿ ರವಿಕುಮಾರ್ ಆಲಿಯಾಸ್ ಅಮಾಸೆ ರವಿ ಹಾಗೂ ಬೋವಿ ಕಾಲೋನಿಯ ರಾಜು ಆಲಿಯಾಸ್ ಗುಂಡ ಬಂಧಿತ ಆರೋಪಿಗಳು.
ಶಿಂಡೇನಹಳ್ಳಿಯ ಸೀನೇಗೌಡರ ಪುತ್ರ ಸುನಿಲ್, ಮುದಗನೂರಿನ ಬಸವೇಗೌಡರ ಪುತ್ರ ಎಂ.ಬಿ.ಗಣೇಶ ಕತ್ತಲಿನಲ್ಲಿ ಪರಾರಿಯಾಗಿರುವ ಆರೋಪಿಗಳು.
ಹೆಣ್ಣು ಜಿಂಕೆಯ ಶವ, ಬೇಟೆಗೆ ಬಳಸಿದ್ದ ಸಿಂಗಲ್ ಬ್ಯಾರಲ್ ಬಂದೂಕು, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ, ಮಚ್ಚು, 5 ಜೀವಂತ ಕಾಡತೂಸುಗಳು, ಬಳಕೆ ಮಾಡಿದ್ದ 1 ಕಾಡುತೂಸುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಯ ವಿವರ: ಆರೋಪಿಗಳು ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವನ್ಯಜೀವಿ ವಲಯಕ್ಕೆ ವನ್ಯಜೀವಿ ಭೇಟೆಯಾಡಲು ಬರುತ್ತಿರುವ ಬಗ್ಗೆ ಮಂಗಳವಾರ ಬೆಳಗಿನ ಜಾವ ಬಂದ ಖಚಿತ ಮಾಹಿತಿ ಮೇರೆಗೆ ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಪಿ.ಎ.ಸೀಮಾರವರ ಮಾರ್ಗದರ್ಶನದಲ್ಲಿ ಆರ್.ಎಫ್.ಓ ವಿನೋದ್ಗೌಡ ನೇತೃತ್ವದ ತಂಡ ಕಣ್ಣಾವಲಿದ್ದ ವೇಳೆ ಬೆಳಗಿನ ಜಾವ 4ರ ವೇಳೆಗೆ ಚಾಮಳ್ಳಿ ಶಾಖೆಯ ಎರೆಕಟ್ಟೆ ಗಸ್ತಿನ ಹೊಸಕಟ್ಟೆ ಕೆರೆ-ಎರಕಟ್ಟೆ ಬಳಿಯ ಜೀಪ್ ರಸ್ತೆಯ ತಿರುವಿನ ಬಳಿ ಗುಂಡಿನ ಶಬ್ದ ಕೇಳಿ ಬಂದ ಕಡೆ ಸಿಬ್ಬಂದಿಗಳು ದೌಡಾಯಿಸಿ ಸುತ್ತುವರಿಯುತ್ತಿದ್ದಂತೆ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಕತ್ತಲಿನಲ್ಲಿ ಮತ್ತಿಬ್ಬರು ಪರಾರಿಯಾಗಿದ್ದಾರೆ.
ಆರೋಪಿಗಳಿಂದ ಪರಿಕರಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಾಹಿತಿ ನೀಡಲು ಎಸಿಎಫ್ ಮನವಿ: ಅರಣ್ಯದಂಚಿನ
ಗ್ರಾಮಸ್ಥರು ಉದ್ಯಾನದೊಳಗೆ ಅಕ್ರಮ ಪ್ರವೇಶ, ಇಂತಹ ಅಪರಾಧ ಕೃತ್ಯಗಳು ಕಂಡು ಬಂದಲ್ಲಿ ಇಲಾಖೆಗೆ ಮಾಹಿತಿ ನೀಡುವಂತೆ ಎಸಿಎಫ್ ಲಕ್ಷ್ಮೀಕಾಂತ್ ಮನವಿ ಮಾಡಿದ್ದಾರೆ. ಸೋಮವಾರ ಓರ್ವನನ್ನು ಬಂಧಿಸಿದ್ದರು. ವಾರದ ಹಿಂದಷ್ಟೆ ಮತ್ತೊಂದು ಪ್ರಕರಣದಲ್ಲಿ ಭೇಟೆಯಾಡಲು ಹೊಂಚು ಹಾಕಿದ್ದ ಇಬ್ಬರನ್ನು ಬಂದಿಸಿರುವುದನ್ನು ಸ್ಮರಿಸಬಹುದು.
ಕಾರ್ಯಾಚರಣೆಯಲ್ಲಿ ಆರ್.ಎಫ್.ಓ. ವಿನೋದ್ಗೌಡ, ಡಿಆರ್ಎಫ್ಓ ನವೀನ್ಕುಮಾರ್, ಸಹನಾ ವಿ.ಪಾಟೀಲ್, ಕೆ.ಶಿಲ್ಪ, ಗಸ್ತು ಅರಣ್ಯಪಾಲಕರಾದ ವೆಂಕಟೇಶ್, ಶಮಂತ, ನಾರಾಯಣ, ಅವಿನಾಶ್, ಅರಣ್ಯ ವೀಕ್ಷಕರಾದ ಶಾಂತಕುಮಾರ್, ಶಿವಕುಮಾರ್, ಗಾಯಿತ್ರಿ ಭಾಗವಹಿಸಿದ್ದರು.
ನಂದಿನಿ ಲೇಔಟ್ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದ…
ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ…
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು…
ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಮೃತದೇಹ ಪತ್ತೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್…
ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ. ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ…
ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ…