ವಿದ್ಯಾಗಿರಿ: ‘ಆಳ್ವಾಸ್ ಪದವಿ ಪೂರ್ವಕಾಲೇಜಿನ 500ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಾರಿ ಸರ್ಕಾರಿ ಕೋಟಾದ ಅಡಿಯಲ್ಲಿ ವೈದ್ಯಕೀಯ ಸೀಟು ಪಡೆಯುವ ಭರವಸೆ ಇದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.
ಆಳ್ವಾಸ್ ಪದವಿ ಪೂರ್ವಕಾಲೇಜು ಶುಕ್ರವಾರ ಹಮ್ಮಿಕೊಂಡ ಪೋಷಕ- ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳಿಗೆ ಗುರಿ ಸಾಧಿಸಲು ನಿರೀಕ್ಷೆ ಮತ್ತು ಕನಸು ಬೇಕು. ಆಗ ಮಾತ್ರ ಕನಸು ನನಸಾಗಲು ಸಾಧ್ಯ. ಆದರೆ, ಇನ್ನೊಬ್ಬರ ಜೊತೆ ನಿಮ್ಮನ್ನು ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿ ವ್ಯಕ್ತಿಯೂ ಅನನ್ಯ. ಅದಕ್ಕಾಗಿ ಗುರಿಯೆಡೆಗಿನ ನಡೆಗೆ ನಿಮ್ಮ ಸಮಯ ಮೀಸಲಿಡಿ’ಎಂದು ಹಿತವಚನ ಹೇಳಿದರು.
‘ವಿದ್ಯಾರ್ಥಿ ಜೀವನವು ಅತ್ಯಮೂಲ್ಯ ಸಮಯವಾಗಿದ್ದು, ಗಾಸಿಪ್ ಆಲಿಸಿಕೊಂಡು ವ್ಯರ್ಥ ಮಾಡಬೇಡಿ. ನಿಮಗೆ ಮಾರ್ಗದರ್ಶನ ಮಾಡಲು, ಸಂಯೋಜಕರು, ಉಪನ್ಯಾಸಕರು ಇದ್ದಾರೆ. ಅವರ ಮಾತು ಕೇಳಿ’ಎಂದು
ಸಲಹೆ ನೀಡಿದರು. ‘ಪೋಷಕರು ಮಕ್ಕಳ ಮೇಲೆ ಒತ್ತಡ ಹೇರುವ ಬದಲಾಗಿ ಪ್ರೋತ್ಸಾಹಿಸಬೇಕು. ಪ್ರೋತ್ಸಾಹವು ಮಕ್ಕಳಿಗೆ ಹುರುಪು ನೀಡುತ್ತದೆ. ಗುರಿಯೆಡೆಗಿನ ಪಯಣ ಸರಳವಾಗುತ್ತದೆ’ ಎಂದರು. ‘ಪ್ರಯತ್ನಕ್ಕೆ ಎಲ್ಲವೂ ಸಾಧ್ಯ’ಎಂದ ಅವರು, ‘ಎಸ್ಸೆಸ್ಸಲ್ಸಿಗಿಂತ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಬೇಕು. ಎನ್ಸಿಆರ್ಟಿ ಪಠ್ಯಕ್ರಮ, ಫೌಂಡೇಷನ್ ಕೋರ್ಸ್, ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು
ಗಮನ ಹರಿಸಿ’ಎಂದರು. ಅಪರಾಹ್ನ ಪೋಷಕರು ತಮ್ಮ ಮಕ್ಕಳ ಪ್ರಗತಿಯ ಕುರಿತು ಶಿಕ್ಷಕರುಗಳ ಜೊತೆ ಸಮಾಲೋಚನೆ ನಡೆಸಿದರು. ದೇಶದ ಬೇರೆ ಬೇರೆ ಭಾಗಗಳಿಂದ ಆಗಮಿಸಿದ್ದ 1450ಕ್ಕೂ ಅಧಿಕ ಪೋಷಕರುಗಳಿಗೆ ಸಂಸ್ಥೆಯ ವತಿಯಿಂದ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆಳ್ವಾಸ್ ಪದವಿಪೂರ್ವಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್, ವಿವಿಧ ಸಂಯೋಜಕರುಗಳು ಇದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…