ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ನಡೆದಿದೆ.

ಹಿರೇಕೆರೂರುಕೋಡ ಗ್ರಾಮದ ನಿವಾಸಿ, ಅಬ್ಬಾಸ್ ನಾಸೂರ್ ಮೃತ ವ್ಯಕ್ತಿ. ಕುಟುಂಬ ಸಮೇತ ಪಿಕ್ನಿಕ್ ಹೋಗಿದ್ದ ಸಂದರ್ಭ ಅಬ್ಬಾಸ್ ನದಿಯಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ನುರಿತ ಈಜು ತಜ್ಞರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



