2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ತೀರ್ಪು ನೀಡಿದೆ.
ಅತ್ರಾಡಿ ಗ್ರಾಮದ ಮದಗ ಪ್ರದೇಶದ ನಿವಾಸಿ ಚೆಲುವಿ ಹಾಗೂ ಆಕೆಯ ಅಪ್ರಾಪ್ತ ವಯಸ್ಕ ಮಗಳು ಪ್ರಿಯಾ ಅವರ ಮೃತದೇಹಗಳು 2022ರ ಮೇ 9ರಂದು ಮನೆಯಲ್ಲಿ ಪತ್ತೆಯಾಗಿದ್ದವು. ಮೇ 8ರ ಸಂಜೆಯಿಂದ 9ರ ಬೆಳಗಿನ ನಡುವಿನ ಅವಧಿಯಲ್ಲಿ ಅಪರಾಧ ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇಬ್ಬರನ್ನೂ ಕತ್ತು ಹಿಸುಕಿಕೊಂಡು ಕೊಲೆ ಮಾಡಿರುವುದು ದೃಢಪಟ್ಟಿರುವ ಹಿನ್ನಲೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿ, ತನಿಖೆಯನ್ನು ಅಂದಿನ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಅವರು ನಡೆಸಿ, ಭದ್ರಾವತಿ ತಾಲೂಕಿನ ಜನ್ನಾಪುರ ನಿವಾಸಿ ಹರೀಶ್ ಆರ್ ಯಾನೆ ಗಣೇಶ್ ಎಂಬತನನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ರು. ಪ್ರಕರಣದ ವಿಚಾರಣೆ ನಡೆಸಿದ ಉಡುಪಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರು ಆರೋಪಿಗೆ ಜೀವಾವಧಿ ಶಿಕ್ಷೆಯ ಜೊತೆಗೆ 20,000 ದಂಡ ವಿಧಿಸಿದ್ದಾರೆ. ಈ ತೀರ್ಪಿನಿಂದ ನಾಲ್ಕು ವರ್ಷಗಳ ಕಾಲ ನಡೆದ ವಿಚಾರಣೆಗೆ ತೆರೆ ಬಿದ್ದಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…