ರಾಜಕೀಯ

ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ…!

ಮಂಗಳೂರು:
ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ ನಡೆಯಿತು.

 

ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಎಲ್. ಬೋಜೆಗೌಡ ಮಾತನಾಡಿ, “ಇದು ಸಾಮಾನ್ಯ ರಾಜಕೀಯ ವಿಚಾರವಲ್ಲ, ದೇಶದ ಅರ್ಧ ಜನಸಂಖ್ಯೆಯ ಹಕ್ಕಿನ ಹೋರಾಟ. ಮಹಿಳಾ ಮೀಸಲಾತಿಯನ್ನು ರಾಜಕೀಯ ಲಾಭಕ್ಕಾಗಿ ತಡೆಹಿಡಿಯುವ ಪ್ರಯತ್ನಗಳು ಅಸಂಗತ ಮತ್ತು ಖಂಡನೀಯ,” ಎಂದು ಹೇಳಿದರು. ಮಹಿಳಾ ಮೀಸಲಾತಿ ಜಾರಿಗಾಗಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.

ಲೋಕಸಭೆಯಲ್ಲಿ ನಡೆದ ಇತ್ತೀಚಿನ ಘಟನೆಗಳನ್ನು ಉಲ್ಲೇಖಿಸಿದ ಅವರು, ಮಹಿಳೆಯರಿಗೆ ನ್ಯಾಯ ನೀಡುವ ವಿಷಯದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಬೆಂಬಲಿಸಬೇಕಾದ ಸಂದರ್ಭದಲ್ಲಿ ವಿರೋಧ ಪಕ್ಷಗಳು ತೋರಿಸುತ್ತಿರುವ ಧೋರಣೆ ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.

ಕೇಂದ್ರದ ಎನ್‌ಡಿಎ ಸರ್ಕಾರ ಮಹಿಳಾ ಮೀಸಲಾತಿಯನ್ನು ಕಾನೂನುಬದ್ಧಗೊಳಿಸಲು ಮುಂದಾಗಿದೆ ಎಂದು ತಿಳಿಸಿದ ಅವರು, ಕಾಂಗ್ರೆಸ್ ಪಕ್ಷ ತನ್ನ ಆಡಳಿತಾವಧಿಯಲ್ಲಿ ಈ ವಿಷಯವನ್ನು ಕಡೆಗಣಿಸಿದ್ದು, ಈಗ ಜಾರಿಗೆ ವಿಳಂಬ ಮಾಡುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದರು.

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಕಾಲದಲ್ಲೇ 33% ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಮಂಡನೆಯಾಗಿತ್ತು ಎಂಬುದನ್ನು ಸ್ಮರಿಸಿದ ಅವರು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ ಐತಿಹಾಸಿಕ ನಿರ್ಧಾರವನ್ನು ಕೂಡ ಉಲ್ಲೇಖಿಸಿದರು.

ಪ್ರಸ್ತುತ ಲೋಕಸಭೆಯಲ್ಲಿ ಮಹಿಳೆಯರ ಪ್ರತಿನಿಧಿತ್ವ ಕೇವಲ 14% ಇರುವುದರತ್ತ ಗಮನ ಸೆಳೆದ ಅವರು, 33% ಮೀಸಲಾತಿ ಜಾರಿಗೆ ಬಂದರೆ ಮಹಿಳೆಯರ ರಾಜಕೀಯ ಪಾಲ್ಗೊಳ್ಳುವಿಕೆ ಗಣನೀಯವಾಗಿ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ, ಜನಸಂಖ್ಯೆಗೆ ಅನುಗುಣವಾದ ಪ್ರತಿನಿಧಿತ್ವದ ಅಗತ್ಯವನ್ನು ಒತ್ತಿ ಹೇಳಿದ ಅವರು, ಸಂಸದರು ಪ್ರತಿನಿಧಿಸುವ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಮತ್ತು ರಾಜ್ಯಾ ಉಪಾದ್ಯಕ್ಷ ಎಂ.ಬಿ. ಸದಾಶಿವ ಅವರು, ಮಹಿಳಾ ಮೀಸಲಾತಿ ಮಸೂದೆಗೆ ತಮ್ಮ ಪಕ್ಷದ ಬಲವಾದ ಬೆಂಬಲವನ್ನು ಪುನರುಚ್ಚರಿಸಿ, ಮಸೂದೆಗೆ ಅಡ್ಡಿಪಡಿಸುವ ಎಲ್ಲ ಪ್ರಯತ್ನಗಳನ್ನು ತೀವ್ರವಾಗಿ ಖಂಡಿಸಿದರು.

ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಕುಂಇ್ , ಜಿಲ್ಲಾ ಕಾರ್ಯದ್ಯಕ್ಷ ಶಶಿರಾಜ್ ಶೆಟ್ಟಿ ಕೊಳಂಬೆ , ಯುವ ಘಟಕ ಅದ್ಯಕ್ಷ ಅಕ್ಷಿತ್ ಸುವರ್ಣ , ರಾಜ್ಯ ಮೀನುಗಾರ ಘಟಕ ಅದ್ಯಕ್ಷ ರತ್ನಕರ್ ಸುವರ್ಣ , ಜಿಲ್ಲಾ ಮುಖಂಡರುಗಳಾದ ವಸಂತ್ ಪೂಜಾರಿ , ಇಕ್ಬಲ್ ಮುಲ್ಕಿ , ಮಾಜಿ ಜಿ. ಪ. ಸದಸ್ಯ ಅಜೀಜ್ ಮಲಾರ್ ,ಉಮೇಶ್ ವೈ. ಗೌಡ, ರಮೀಜಾ ನಾಸೀರ್ ,ರೀತೆಶ್ , ಮುನೀರ್ ಮುಕ್ಕಚೇರಿ, ಭಾರತಿ, ಪುಷ್ಪರಾಜನ್ , ಪುತ್ತು ಮೋನು , ಇಬ್ರಾಹಿಂ ಜಪ್ಪು , ಅಕ್ಷ ಉಸ್ಮನ್ , ರಘನಾಥ್ ಶೇಟ್ , ವಿನ್ಸಂಟ್ , ಪ್ರಶಾಂತ್ ಭಟ್ ಕಡಬ,ಚೇತನ್ ವೈ ಶೆಟ್ಟಿ , ಚಂದ್ರಕಲಾ , ಜೋತಿ ಲಕ್ಷಿ. ಸರೋಜಿನಿ , ನಿರಂಜನ ಸುನಿಲ್ ,ಚಿತ್ತರಂಜನ್ , ಸ್ಟಾನಿ , ಜಲೀಲ್ ಮತ್ತಿತರ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು ಕಾರ್ಯಕ್ರಮದ ಕೊನೆಗೆ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ದನ್ಯವಾದ ಅರ್ಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ನಿಟ್ಟೆ ವಿ.ವಿ. ಮಾಧ್ಯಮ ಸಮಾವೇಶ ಸಮಾರೋಪ…!

ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…

1 day ago

ಉಡುಪಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಪ್ರವಾಸಿ ಬಸ್ ಢಿ*ಕ್ಕಿ….!

ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…

2 days ago

ಉಡುಪಿ: ತಾಯಿ-ಮಗಳ ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ….!

2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ…

2 days ago

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಅಪ*ಘಾತ…!

ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸುಳ್ಯ ಕೊಯನಾಡು ಸರ್ವಿಸ್ ಬಸ್ಸು…

2 days ago

ಹಾವೇರಿ: ನದಿಗೆ ಸ್ನಾನಕ್ಕೆ ಇಳಿಯುವ ಸಂದರ್ಭ ಕಾಲು ಜಾರಿ ವ್ಯಕ್ತಿ ಮೃತ್ಯು..!

ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ…

2 days ago

ಗಾಜಿಯಾಬಾದ್: ಗಾಜಿಯಾಬಾದ್ ಅಪಾರ್ಟ್ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ..!

ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ಗೌರ್ ಗ್ರೀನ್ ಅವೆನ್ಯೂ ಹೌಸಿಂಗ್ ಸೊಸೈಟಿಯ ಒಂಭತ್ತನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಳಿಗ್ಗೆ…

2 days ago