ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.
ನೇತ್ರಾವತಿ ಹೊಸ ಸೇತುವೆಯ ಕೆಳಭಾಗದಲ್ಲಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಶವವೊಂದು ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ. ಈ ಬಗ್ಗೆ ಈಶ್ವರ ಮಲ್ಪೆಯವರಿಗೆ ಮಾಹಿತಿ ಸಿಕ್ಕಿದ್ದು, ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಶವವನ್ನು ಮೇಲಕ್ಕೆ ಎತ್ತಲು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಸಾಧ್ಯವಾಗದೆ ಇದ್ದಾಗ, ಆಪತ್ಬಾಂಧವ ನೇತ್ರಾವತಿ ವೀರರಾದ ನಿಶಾರ್ ಎಂ.ಕೆ ಇಬ್ರಾಹಿಂ ಅವರು ತನಗೆ ಅಪಘಾತದಲ್ಲಿ ಕಾಲಿಗೆ ನೋವಾಗಿದ್ದರು ಲೆಕ್ಕಿಸದೆ ಶವವನ್ನು ಮೇಲಕ್ಕೆತ್ತಿದ್ದಾರೆ. ಇವರ ಮಾನವೀಯ ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…