ಜನ ಮನದ ನಾಡಿ ಮಿಡಿತ

Advertisement

ಹುಣಸೂರು: “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ…!

ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ:

 

ತಾಲ್ಲೂಕಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ: ವಿದ್ಯುನ್ಮಾನ ಮಾಹಿತಿ ಫಲಕ ಮತ್ತು ಆರೋಗ್ಯ ದಿನಚರಿಯ ಸಮರ್ಪಣಾ ಕಾರ್ಯಕ್ರಮವನ್ನು ಹುಣಸೂರಿನಲ್ಲಿ ಯಶಸ್ವಿಯಾಗಿ ನಡೆಸಲಾಯಿತು.

ಈ ಯೋಜನೆಯನ್ನು ಗ್ರಾಮ್ ಸಂಸ್ಥೆಯು ಹುಣಸೂರು ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸುತ್ತಿದ್ದು, ಕಾರ್ಯಕ್ರಮದಲ್ಲಿ ಸರಿ ಸುಮಾರು 400 ಮಂದಿ ಭಾಗವಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮುದಾಯ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಇನ್ನಿತರೆ ಗ್ರಾಮೀಣ ಪ್ರದೇಶದ ವ್ಯಕ್ತಿಗಳು ಭಾಗವಹಿಸಿ ಗ್ರಾಮೀಣ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಸಮುದಾಯದ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಬಗ್ಗೆ ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಪಂಚಾಯತ್ ರಾಜ್ ಆಯುಕ್ತಾಲಯದ ಉಪ ನಿರ್ದೇಶಕರಾದ ಶ್ರೀ ಕೃಷ್ಣಕುಮಾ‌ರ್, ಮೈಸೂರು ಜಿಲ್ಲೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಾಗರಾಜ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹ ಅಧಿಕಾರಿ ಶ್ರೀ ಹೊಂಗಯ್ಯ, ಹುಣಸೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದರ್ಶನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಹರೀಶ್ ಹಾಗೂ ಗ್ರಾಮ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಬಸವರಾಜ್ ಆರ್. ಶ್ರೇಷ್ಠ ಸೇರಿದಂತೆ. ಪಿ ಡಿ ಓ, ಸಿ ಎಚ್ ಓ, ಪಿ ಎಚ್ ಸಿ ಓ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಕಾರ್ಯಕ್ರಮದ ಸಿಬ್ಬಂದಿಗಳು ಮತ್ತು ಒಕ್ಕೂಟದ ಪಧಾಧಿಕಾರಿಗಳು ಹಾಗೂ ಸಮುದಾಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!