ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಪೊಲೀಸರೊಂದಿಗೆ ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ ಆರೋಪ – ಓರ್ವನ‌ ಬಂಧನ…!

 

ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ‌ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಲು ಪದಾರ್ಥ ಸೇವಿಸಿ ಧ್ವಿಚಕ್ರ ವಾಹನವನ್ನು ಚಲಾಯಿಸಿದ ಯುವಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕು ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26 ವ.) ಬಂಧಿತ ಆರೋಪಿ.ಮೇ.೩ರಂದು ಮಧ್ಯಾಹ್ನದ ವೇಳೆ ವಿಟ್ಲ ಠಾಣಾ ಎಸ್.ಐ. ಬಿ ಎಸ್ ನಾಯಕ್ ರವರು ಸಿಬ್ಬಂದಿಗಳೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿರುವಾಗ, ಅದೇ ದಾರಿಯಾಗಿ ಬಂದ ದ್ವಿಚಕ್ರ ವಾಹನದಲ್ಲಿ ಅದರ ಸವಾರ ಹೆಲ್ಮೇಟ್ ಧರಿಸದೇ ವಾಹನ ಚಲಾಯಿಸಿಕೊಂಡು ಬರುತ್ತಿರುವುದು ಕಂಡುಬಂದಿತ್ತು. ಕೂಡಲೇ ಆತನನ್ನು ತಡೆದು ನಿಲ್ಲಿಸಿ ವಿಚಾರಣೆ‌ ನಡೆಸಿದಾಗ ಆತ ಎಸ್.ಐ. ಬಿ.ಎಸ್.ನಾಯಕ್‌ರವರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಆತನ ವರ್ತನೆಯಿಂದ ಸಂಶಯಗೊಂಡ ಪೊಲೀಸರು ಆತ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಸಂಶಯಗೊಂಡು ಈ ಬಗ್ಗೆ ವಿಚಾರಿಸಿದಾಗ ಆತ ಅಮಲು ಪದಾರ್ಥ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದ. ಬಳಿಕ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆತ ಮಾದಕವಸ್ತು ಸೇವನೆ ನಾಡಿರುವುದು ಧೃಢಪಟ್ಟಿತ್ತು. ಆರೋಪಿಯನ್ನು ಬಂಧಿಸಿರುವ ವಿಟ್ಲ ‌ಠಾಣಾ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರಿನಿಂದ  ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆ*0ಕಿ…!

ವಿಟ್ಲ: ಕಾರಿಗೆ ಬಸ್ಸು ಡಿಕ್ಕಿ – ಇಬ್ಬರಿಗೆ ಗಾಯ…!

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ…!

ಹುಣಸೂರು: “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ…!

ಬಂಟ್ವಾಳ : ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಮೃತ್ತ್ಯು…!

ಮಂಗಳೂರು: ಮಾದಕ ದ್ರವ್ಯ ಕಳ್ಳಸಾಗಣೆ, ಸಹೋದರರ ಬಂಧನ….!

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪ*ತ್ತೆ….!

ಬಂಟ್ವಾಳ: ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆ*ಂಕಿ….!

ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ…!

error: Content is protected !!