ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಪೊಲೀಸರೊಂದಿಗೆ ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ ಆರೋಪ – ಓರ್ವನ‌ ಬಂಧನ…!

 

ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ‌ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಲು ಪದಾರ್ಥ ಸೇವಿಸಿ ಧ್ವಿಚಕ್ರ ವಾಹನವನ್ನು ಚಲಾಯಿಸಿದ ಯುವಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕು ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26 ವ.) ಬಂಧಿತ ಆರೋಪಿ.ಮೇ.೩ರಂದು ಮಧ್ಯಾಹ್ನದ ವೇಳೆ ವಿಟ್ಲ ಠಾಣಾ ಎಸ್.ಐ. ಬಿ ಎಸ್ ನಾಯಕ್ ರವರು ಸಿಬ್ಬಂದಿಗಳೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿರುವಾಗ, ಅದೇ ದಾರಿಯಾಗಿ ಬಂದ ದ್ವಿಚಕ್ರ ವಾಹನದಲ್ಲಿ ಅದರ ಸವಾರ ಹೆಲ್ಮೇಟ್ ಧರಿಸದೇ ವಾಹನ ಚಲಾಯಿಸಿಕೊಂಡು ಬರುತ್ತಿರುವುದು ಕಂಡುಬಂದಿತ್ತು. ಕೂಡಲೇ ಆತನನ್ನು ತಡೆದು ನಿಲ್ಲಿಸಿ ವಿಚಾರಣೆ‌ ನಡೆಸಿದಾಗ ಆತ ಎಸ್.ಐ. ಬಿ.ಎಸ್.ನಾಯಕ್‌ರವರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಆತನ ವರ್ತನೆಯಿಂದ ಸಂಶಯಗೊಂಡ ಪೊಲೀಸರು ಆತ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಸಂಶಯಗೊಂಡು ಈ ಬಗ್ಗೆ ವಿಚಾರಿಸಿದಾಗ ಆತ ಅಮಲು ಪದಾರ್ಥ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದ. ಬಳಿಕ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆತ ಮಾದಕವಸ್ತು ಸೇವನೆ ನಾಡಿರುವುದು ಧೃಢಪಟ್ಟಿತ್ತು. ಆರೋಪಿಯನ್ನು ಬಂಧಿಸಿರುವ ವಿಟ್ಲ ‌ಠಾಣಾ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!